ನವದೆಹಲಿ: ದೇಶದಾದ್ಯಂತ ಕೊರೋನಾ ಸೋಂಕು ತಗುಲಿ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29.70 ಲಕ್ಷಕ್ಕೂ ಅಧಿಕವಾಗಿದ್ದು, ಇದು ಸಕ್ರಿಯ ಕೊರೋನಾ ಪ್ರಕರಣಗಳಿಂದ 3.5 ಪಟ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ಈ ಸಂಬಂಧ ಮಾಹಿತಿ ನೀಡಿರುವ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಸುಮಾರು 11 ಲಕ್ಷಕ್ಕೂ ಅಧಿಕ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ ಒಂದೇ ದಿನದಲ್ಲಿ 68 ಸಾವಿರಕ್ಕೂ ಅಧಿಕ ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿರುವುದಾಗಿ ಅವರು ಹೇಳಿದ್ದಾರೆ.
ಕರ್ನಾಟಕವೂ ಸೇರಿದಂತೆ ಉತ್ತರ ಪ್ರದೇಶ, ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ದೇಶದ ಒಟ್ಟು ಕೊರೋನಾ ಸೋಂಕಿತರ ಪ್ರಮಾಣದ 62% ರಷ್ಟು ಪ್ರಕರಣಗಳಿವೆ. ಈ ರಾಜ್ಯಗಳಲ್ಲಿ 70% ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಈ ವರದಿ ಹೇಳಿದೆ. ಆಂಧ್ರಪ್ರದೇಶದಲ್ಲಿ 13.7%, ಕರ್ನಾಟಕದಲ್ಲಿ 16.1%, ಮಹಾರಾಷ್ಟ್ರದಲ್ಲಿ 6.8%, ತಮಿಳುನಾಡು 23.9%, ಉ.ಪ್ರದೇಶದಲ್ಲಿ 17.1% ದಷ್ಟು ಪ್ರಮಾಣದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ ಎಂದೂ ಸಚಿವಾಲಯ ವರದಿಯಲ್ಲಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.