ಬೆಂಗಳೂರು: ನೂತನ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ 2020-25 ಗೆ ರಾಜ್ಯ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. ಇದರಿಂದಾಗಿ ಸುಮಾರು 60 ಲಕ್ಷ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಮಾತನಾಡಿರುವ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಈ ಬಾರಿಯ ದೇಶದ ಒಟ್ಟು ಡಿಜಿಟಲ್ ಆರ್ಥಿಕತೆಯಲ್ಲಿ ಕರ್ನಾಟಕ ರಾಜ್ಯ 30% ದಷ್ಟು ಪಾಲು ಹೊಂದುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉಪಕರಣಗಳ ಉತ್ಪಾದನಾ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಹಲವು ರಿಯಾಯಿತಿಗಳನ್ನು ನೀಡಲಾಗುವುದಾಗಿಯೂ ಅವರು ಹೇಳಿದ್ದಾರೆ.
ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಂಡವಾಳ ಹೂಡಿಕೆ ಮಾಡುವವರಿಗೆ ಘಟಕ ಮತ್ತು ಯಂತ್ರೋಪಕರಣಗಳ ಖರೀದಿಗೆ 20% ಸಬ್ಸಿಡಿ, ಭೂಮಿ ಖರೀದಿಗೆ 25% ಸಬ್ಸಿಡಿ ನೀಡುವುದಾಗಿಯೂ ಸಚಿವರು ತಿಳಿಸಿದ್ದಾರೆ.
ಮುದ್ರಾಂಕ ಮತ್ತು ನೋಂದಣಿ ಶುಲ್ಕ ಪಾವತಿಯನ್ನು 100% ದಷ್ಟು, ಭೂ ಪರಿವರ್ತನಾ ಶುಲ್ಕವನ್ನು 100% ಗಳಷ್ಟು ಹಿಂದಿರುಗಿಸಲಾಗುವುದು. ವಿದ್ಯುತ್ ದರದ ಪ್ರತಿ ಯೂನಿಟ್ನ ಮೊತ್ತದಲ್ಲಿ ಒಂದು ರಿಯಾಯಿತಿ ಮೊದಲಾದ ಪ್ರಯೋಜನಗಳನ್ನು ಉದ್ಯಮ ಆರಂಭಿಸಿದ 5 ವರ್ಷಗಳವರೆಗೆ ನೀಡಲಾಗುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.