ನವದೆಹಲಿ: ಸಿರಿಯಾದ ರಾಷ್ಟ್ರೀಯ ಮರು ನಿರ್ಮಾಣದ ಪ್ರಯತ್ನಗಳಿಗೆ ಭಾರತ ಬೆಂಬಲ ನೀಡಲಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್ ಅವರು ಮಾಹಿತಿ ನೀಡಿದ್ದಾರೆ.
ಅವರು ನಿನ್ನೆಯಷ್ಟೇ ಸಿರಿಯಾದ ವಿದೇಶಾಂಗ ಸಚಿವ ಎಚ್.ಇ. ಫೇಸಲ್ ಮೆಕ್ಡಾಡ್ ಅವರ ಜೊತೆಗೆ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸಿರಿಯಾದ ವಿದೇಶಾಂಗ ಸಚಿವರ ಜೊತೆಗೆ ಇಂದು ಅರ್ಥಪೂರ್ಣ, ಅತ್ಯುತ್ತಮ ಚರ್ಚೆ ನಡೆಸಲಾಯಿತು. ಅವರು ಭಾರತ, ಭಾರತೀಯರ ಬಗ್ಗೆ ಆತ್ಮೀಯವಾದ ಭಾವನೆಗಳನ್ನು ಹೊಂದಿದ್ದಾರೆ. ಅವರಿಗೆ ಕೃತಜ್ಞತೆ ಅರ್ಪಿಸುವುದಾಗಿಯೂ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುರಳೀಧರನ್, ಸಿರಿಯಾದ ಪೀಪಲ್ಸ್ ಚುನಾವಣಾ ಯಶಸ್ಸಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಜೊತೆಗೆ, ರಾಷ್ಟ್ರೀಯ ಪುನರ್ ನಿರ್ಮಾಣ ಕಾರ್ಯಗಳಿಗೂ ಭಾರತ ಸಂಪೂರ್ಣ ಬೆಂಬಲ ನೀಡಲಿರುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ, ಉಭಯ ದೇಶಗಳ ದ್ವಿಪಕ್ಷೀಯ ಅಭಿವೃದ್ಧಿ ಯೋಜನೆಗೆ ತೀವ್ರಗತಿ ತರುವುದು, ಸಹಕಾರ ವೃದ್ಧಿಗೆ ಸಂಬಂಧಿಸಿದಂತೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಕೊರೋನಾ ಸಂಕಷ್ಟದಿಂದ ಹೊರಬರಲು ಸಿರಿಯಾಗೆ ಭಾರತ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.