ರಾಂಚಿ: ಜಾರ್ಖಂಡ್ ರಾಜ್ಯದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾದ 18 ಸುಧಾರಿತ ಸ್ಫೋಟಕಗಳನ್ನು ಭದ್ರತಾ ಸಿಬ್ಬಂದಿಗಳು ನಿಷ್ಕ್ರಿಯಗೊಳಿಸಿ ಅನಾಹುತ ತಪ್ಪಿಸಿದ್ದಾರೆ.
ರಾಜ್ಯದ ಸಿಂಗ್ಭೂಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಈ ಸುಧಾರಿತ ಸ್ಫೋಟಕಗಳಿರುವುದು ಕೇಂದ್ರೀಯ ಮೀಸಲು ಪಡೆ ಪೊಲೀಸರ ಕಾರ್ಯಾಚರಣೆಯ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿತ್ತು. ಈ ಸ್ಫೋಟಕ ವಸ್ತುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗೆಯೇ ಈ ಕೃತ್ಯವನ್ನು ಮಾವೋವಾದಿ ಉಗ್ರರು ನಡೆಸಿರಬಹುದು ಎಂಬುದಾಗಿಯೂ ಶಂಕೆ ವ್ಯಕ್ತಪಡಿಸಿದ್ದಾರೆ.
ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಈ ಕೃತ್ಯ ನಡೆಸಲಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟಕಗಳು ಪತ್ತೆಯಾದ ತಕ್ಷಣವೇ ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕಾಗಮಿಸಿ ನಡೆಯಲಿದ್ದ ಅನಾಹುತ ತಪ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.