ಮಾಸ್ಕೋ: ಭಾರತ ಮತ್ತು ರಷ್ಯಾ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಂಡಿದೆ. ಪಾಕಿಸ್ಥಾಕ್ಕೆ ಶಸ್ತ್ರಾಸ್ತ್ರ ಪೂರೈಕೆ ಮಾಡದಿರುವ ನೀತಿಯೊಂದಿಗೆ ಮುಂದುವರೆಯುದಾಗಿ ರಷ್ಯಾ ಭಾರತಕ್ಕೆ ಭರವಸೆ ನೀಡಿದೆ.
ಗುರುವಾರ ಸಂಜೆ ಮಾಸ್ಕೋದಲ್ಲಿ ನಡೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಷ್ಯಾ ರಕ್ಷಣಾ ಸಚಿವ ಜನರಲ್ ಸೆರ್ಗೆ ಶೋಯಿಗು ಅವರ ಭೇಟಿಯ ಸಂದರ್ಭದಲ್ಲಿ ರಷ್ಯಾ ತನ್ನ ನೀತಿಯನ್ನು ಪುನರುಚ್ಚರಿಸಿದೆ.
“ಭಾರತದ ಕೋರಿಕೆಯ ಮೇರೆಗೆ ಪಾಕಿಸ್ಥಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡದಿರುವ ನೀತಿಯನ್ನು ರಷ್ಯಾ ಪುನರುಚ್ಚರಿಸಿದೆ” ಎಂದು ಮೂಲಗಳು ತಿಳಿಸಿವೆ.
ರಾಜನಾಥ್ ಸಿಂಗ್ ಮತ್ತು ಜನರಲ್ ಶೋಯಿಗು ನಡುವಿನ ಸಭೆ ಸುಮಾರು ಒಂದು ಗಂಟೆ ಕಾಲ ನಡೆಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದು ಮಾಸ್ಕೋದಲ್ಲಿನ ರಷ್ಯಾ ರಕ್ಷಣಾ ಸಚಿವಾಲಯದಲ್ಲಿ ನಡೆದಿದೆ
“ಈ ಸಭೆಯು ಉಭಯ ದೇಶಗಳ ನಡುವಿನ ವ್ಯಾಪಕವಾದ ಸಹಕಾರ ಕ್ಷೇತ್ರಗಳನ್ನು ಒಳಗೊಂಡಿದೆ” ಎಂದು ಸಚಿವಾಲಯ ಹೇಳಿದೆ.
ಸ್ನೇಹಪರ ರಾಷ್ಟ್ರಗಳ ನಡುವೆ ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರವನ್ನು ಬಲಪಡಿಸುವ ಕುರಿತು ಉಭಯ ಸಚಿವರು ಮಾತುಕತೆ ನಡೆಸಿದರು.
“ಇಂದು ಮಾಸ್ಕೋದಲ್ಲಿ ರಷ್ಯಾದ ರಕ್ಷಣಾ ಸಚಿವ ಜನರಲ್ ಸೆರ್ಗೆ ಶೋಯಿಗು ಅವರೊಂದಿಗೆ ಅತ್ಯುತ್ತಮ ಸಭೆ ನಡೆಯಿತು. ನಾವು ವ್ಯಾಪಕವಾದ ವಿಷಯಗಳ ಬಗ್ಗೆ ಮಾತನಾಡಿದ್ದೇವೆ, ವಿಶೇಷವಾಗಿ ಎರಡೂ ದೇಶಗಳ ನಡುವೆ ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರವನ್ನು ಹೇಗೆ ಗಾಢವಾಗಿಸಬಹುದು ಎಂದು ಚರ್ಚಿಸಲಾಯಿತು” ಎಂದು ರಾಜನಾಥ್ ಸಿಂಗ್ ತಮ್ಮ ಸಭೆಯ ನಂತರ ಟ್ವೀಟ್ ಮಾಡಿದ್ದಾರೆ.
ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಮಂತ್ರಿಗಳ ಸಂಯೋಜಿತ ಸಭೆಯಲ್ಲಿ ಭಾಗವಹಿಸಲು ರಕ್ಷಣಾ ಸಚಿವರು ಮೂರು ದಿನಗಳ ಭೇಟಿಗೆ ಮಾಸ್ಕೋಗೆ ತೆರಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.