ನವದೆಹಲಿ: ಶಿಕ್ಷಕರ ದಿನಾಚರಣೆಯಾದ ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾರತದಾದ್ಯಂತದ 47 ಶಿಕ್ಷಕರನ್ನು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2020 ರೊಂದಿಗೆ ಸನ್ಮಾನಿಸಿದರು. ಈ ವರ್ಷ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊರೋನಾನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ವರ್ಚುವಲ್ ಆಗಿ ನಡೆಸಲಾಯಿತು.
ರಾಷ್ಟ್ರಪತಿ ಕೋವಿಂದ್ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು ಮತ್ತು ಸಮಾರಂಭದ ಕೆಲವು ದೃಶ್ಯಗಳನ್ನು ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡರು. ವಿದ್ಯಾರ್ಥಿಗಳ ಬಗ್ಗೆ ಕಠಿಣ ಮತ್ತು ಸಮರ್ಪಣೆಯನ್ನು ತೋರಿಸುತ್ತಿರುವುದಕ್ಕಾಗಿ ಶಿಕ್ಷಕರನ್ನು ಶ್ಲಾಘಿಸಿದರು ಮತ್ತು ಅವರಿಗೆ ಹಾರೈಸಿದರು.
ಕೊರೋನಾ ಕಾರಣ ಈ ವರ್ಷ ಆನ್ಲೈನ್ ಶಿಕ್ಷಣವನ್ನು ನೀಡಿದ್ದಕ್ಕಾಗಿ ಶಿಕ್ಷಕರನ್ನು ಶ್ಲಾಘಿಸಿದರು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದರು. “ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಲು ತಂತ್ರಜ್ಞಾನದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನೀವು ತಿಳಿದುಕೊಳ್ಳಬೇಕಾಗಿದೆ” ಎಂದು ಶಿಕ್ಷಕರಿಗೆ ಅವರು ಸಲಹೆ ನೀಡಿದರು.
ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಸಮಾರಂಭವನ್ನು ವರ್ಚುವಲ್ ಆಗಿ ನಡೆಸಲಾಗುವುದು ಎಂದು ಪ್ರಶಸ್ತಿಗಳನ್ನು ಸ್ವೀಕರಿಸಿದ ಎಲ್ಲ ಶಿಕ್ಷಕರಿಗೆ ಆಗಸ್ಟ್ 25 ರಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿತ್ತು.
ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಿಕ್ಷಕರು ನೀಡುವ ನಿಸ್ವಾರ್ಥ ಕೊಡುಗೆಯನ್ನು ಆಚರಿಸಲು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
शिक्षक दिवस के अवसर पर आप सभी शिक्षकों के साथ जुड़कर मुझे बहुत प्रसन्नता हो रही है। मैं राष्ट्रीय पुरस्कार के लिए चुने गए सभी शिक्षकों को हार्दिक बधाई और शुभकामनाएं देता हूं। आज सभी शिक्षकों की प्रतिबद्धता, समर्पण और उत्कृष्ट योगदान के प्रति हम अपना आभार व्यक्त करते हैं। pic.twitter.com/xM4ozPksKZ
— President of India (@rashtrapatibhvn) September 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.