ನವದೆಹಲಿ: ಕೊರೋನಾವೈರಸ್ ಆತಂಕದ ನಡುವೆ ನಡೆಯುತ್ತಿರುವ ಲೋಕಸಭಾ ಮತ್ತು ರಾಜ್ಯಸಭಾದ ಮಳೆಗಾಲದ ಅಧಿವೇಶನದಲ್ಲಿ ಈ ಬಾರಿ ಪ್ರಶ್ನೋತ್ತರ ಅವಧಿಯನ್ನು ತೆಗೆದು ಹಾಕಲಾಗಿದೆ. ಅನಿವಾರ್ಯ ಕಾರಣದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆದರೆ ಇದನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಅಪಪ್ರಚಾರ ನಡೆಸುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.
ಸಂಸತ್ತಿನ ಮಳೆಗಾಲದ ಅಧಿವೇಶನ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 10ರವರೆಗೆ ಯಾವುದೇ ರಜಾ ದಿನವಿಲ್ಲದೆ ನಡೆಯಲಿದೆ. ಲೋಕಸಭೆ ಮತ್ತು ರಾಜ್ಯಸಭೆ ದಿನಕ್ಕೆ ಕೇವಲ ನಾಲ್ಕು ಗಂಟೆ ಕಾರ್ಯನಿರ್ವಹಿಸಲಿದೆ, ಉಭಯ ಸದನಗಳು ಕೋವಿಡ್ ಶಿಷ್ಟಾಚಾರ ಅನುಸರಿಸಲಿವೆ. ಎಲ್ಲಾ ರಾಜಕೀಯ ಪಕ್ಷಗಳ ಹಿರಿಯ ನಾಯಕರೊಂದಿಗೆ ಸಮಾಲೋಚಿಸಿದ ಬಳಿಕವೇ ಪ್ರಶ್ನೋತ್ತರ ಅವಧಿ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪಂಜಾಬ್, ರಾಜಸ್ಥಾನ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಇತ್ತೀಚಿನ ಅಧಿವೇಶನಗಳು ಕೂಡ ಪ್ರಶ್ನೋತ್ತರ ಅವಧಿಯನ್ನು ಹೊಂದಿರಲಿಲ್ಲ. ಮುಂಬರುವ ಪಶ್ಚಿಮಬಂಗಾಳದ ವಿಧಾನಸಭಾ ಅಧಿವೇಶನ ಕೂಡ ಪ್ರಶ್ನೋತ್ತರ ಅವಧಿಯನ್ನು ಹೊಂದಿರುವುದಿಲ್ಲ. ಆದರೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮೊಟಕುಗೊಳಿಸಿದ ಬಗ್ಗೆ ಕಾಂಗ್ರೆಸ್, ಟಿಎಂಸಿ ಮತ್ತು ಎಡಪಕ್ಷಗಳು ವಿನಾಕಾರಣ ವಿರೋಧಿಸಿ ಜನರನ್ನು ದಾರಿತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.
ಸಂಸದರಿಗೆ ಅಧಿವೇಶನದ ವೇಳೆ ಪ್ರಶ್ನೆ ಕೇಳುವ ಅವಕಾಶ ನೀಡಲಾಗಿದೆ, ಇದಕ್ಕೆ ಅವರು ಲಿಖಿತ ಉತ್ತರ ಪಡೆಯಲಿದ್ದಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
1962, 1975, 1976, 1991, 2004 ಮತ್ತು 2019ರಲ್ಲಿ ಹಲವು ಕಾರಣಗಳಿಗಾಗಿ ಪ್ರಶ್ನೋತ್ತರ ಅವಧಿಯನ್ನು ಮೊಟಕುಗೊಳಿಸಲಾಗಿತ್ತು.
ಕಳೆದ ರಾಜ್ಯಸಭಾ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಗಾಗಿ ಮೀಸಲಾಗಿಟ್ಟಿದ್ದ ಸಮಯದಲ್ಲಿ 63.32%ರಷ್ಟು ಸಮಯ ಗದ್ದಲ, ಅನಿವಾರ್ಯ ಮುಂದೂಡಿಕೆ ಕಾರಣಗಳಿಂದ ವ್ಯರ್ಥವಾಗಿದೆ. ಹೀಗಾಗಿ ಕೊರೋನಾ ಆತಂಕದ ನಡುವೆ ನಡೆಯುವ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯನ್ನು ಸರ್ಕಾರ ಕೈಬಿಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.