ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ನಿಧಾನವಾಗಿ ಜನರ ಮುಂದೆ ತೆರೆದುಕೊಳ್ಳುತ್ತಿದೆ. ಚಲನಚಿತ್ರರಂಗದ ಕೆಲವರು ಮತ್ತು ಇತರರು ಡ್ರಗ್ಸ್ ಜಾಲದಲ್ಲಿ ಇದ್ದಾರೆ ಎಂಬುದು ಈಗ ಸ್ಪಷ್ಟವಾಗುತ್ತಿದೆ. ಸಿಸಿಬಿ ಪೊಲೀಸರು ಈ ನಿಟ್ಟಿನಲ್ಲಿ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇನ್ನಷ್ಟು ವಿಚಾರಗಳು ಬಹಿರಂಗವಾಗುವ ಸಾಧ್ಯತೆ ಇದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಡ್ರಗ್ಸ್ ಮಾಫಿಯಾದ ಬಗ್ಗೆ ಧ್ವನಿಯೆತ್ತಿದ್ದು, ಬುಡಸಮೇತ ಡ್ರಗ್ಸ್ ಮಾಫಿಯಾವನ್ನು ಕಿತ್ತುಹಾಕುವ ಭರವಸೆಯನ್ನು ನೀಡಿದ್ದಾರೆ.
“ಡ್ರಗ್ಸ್ ಜಾಲವನ್ನು ಅಂತ್ಯಗೊಳಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಅವರ ಮಾತನ್ನು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಜ್ಞಾವಂತ ನಾಗರಿಕರು ಮುಕ್ತ ಮನಸ್ಸಿನಿಂದ ಸ್ವಾಗತಿಸಿದ್ದಾರೆ. ದಂಧೆಯಲ್ಲಿ ಇರುವವರು ಎಷ್ಟು ದೊಡ್ಡ ಪ್ರಭಾವಿಗಳಾಗಿದ್ದರೂ ಈ ನೆಲದ ಕಾನೂನನ್ನು ಅವರು ಮುರಿದಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸಲು ಸಾಧ್ಯವೇ ಇಲ್ಲ. ನಮ್ಮ ಪಕ್ಷ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನವನ್ನು ಹಮ್ಮಿಕೊಂಡಿದ್ದು, ಡ್ರಗ್ಸ್ ಅನ್ನು ರಾಜ್ಯದಿಂದ ಸಂಪೂರ್ಣವಾಗಿ ತೊಲಗಿಸುವವರೆಗೆ ವಿರಮಿಸುವುದಿಲ್ಲ” ಎಂದಿದ್ದಾರೆ.
ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ.
1/2
— Nalinkumar Kateel (@nalinkateel) September 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.