ನವದೆಹಲಿ: ಹೊಸ ಶಿಕ್ಷಣ ನೀತಿ ಕುರಿತು ರಾಜ್ಯಪಾಲರ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮಾತನಾಡಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಕೂಡ ಈ ವಿಡಿಯೋ ಕಾನ್ಫರೆನ್ಸಿಂಗ್ ಸಮಾರಂಭದಲ್ಲಿ ಭಾಗಿಯಾದರು.
ಎನ್ಇಪಿ 2020 ರ ಕೆಲಸವು ಐದು ವರ್ಷಗಳ ಹಿಂದೆ ಪ್ರಾರಂಭವಾಯಿತು ಮತ್ತು ಹೊಸ ನೀತಿಯನ್ನು ರೂಪಿಸಲು ಎರಡು ಲಕ್ಷಕ್ಕೂ ಹೆಚ್ಚು ಜನರ ಸಲಹೆಗಳನ್ನು ನೀಡಿದ್ದಾರೆ ಎಂದು ಮೋದಿ ಹೇಳಿದರು.
“ಹೊಸ ಶಿಕ್ಷಣ ನೀತಿಯು ಅಧ್ಯಯನದ ಬದಲು ಕಲಿಕೆಯ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ವಿಮರ್ಶಾತ್ಮಕ ಚಿಂತನೆಯತ್ತ ಗಮನಹರಿಸಲು ಪಠ್ಯಕ್ರಮವನ್ನು ಹೊಂದಿದೆ. ಈ ನೀತಿಯಲ್ಲಿ ನಾವು ಉತ್ಸಾಹ, ಪ್ರಾಯೋಗಿಕತೆ ಮತ್ತು ಕಾರ್ಯಕ್ಷಮತೆಗೆ ಒತ್ತು ನೀಡಿದ್ದೇವೆ” ಎಂದು ಅವರು ಹೇಳಿದರು.
ಎನ್ಇಪಿ 2020 ಆತ್ಮನಿರ್ಭರ ಭಾರತದತ್ತ ದೇಶದ ಗುರಿಯನ್ನು ನಿರ್ದೇಶಿಸುತ್ತದೆ ಮತ್ತು ಭವಿಷ್ಯದಲ್ಲಿ ಭಾರತ ಹೆಚ್ಚು ಸ್ವಾವಲಂಬಿಯಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನಿಜವಾದ ಜ್ಞಾನವು ಮನಸ್ಸನ್ನು ಮುಕ್ತಗೊಳಿಸುತ್ತದೆ. ಹೊಸ ಎನ್ಇಪಿ 2020 ರೊಂದಿಗೆ ಯುವಕರು ತಮ್ಮ ಆಸಕ್ತಿಗೆ ಅನುಗುಣವಾಗಿ ವಿಷಯಗಳನ್ನು ಅಧ್ಯಯನ ಮಾಡಬಹುದು. ರಾಷ್ಟ್ರೀಯ ಆಕಾಂಕ್ಷೆಗಳನ್ನು ಈಡೇರಿಸಲು ಹೊಸ ಶಿಕ್ಷಣ ನೀತಿ ಮುಖ್ಯವಾಗಿದೆ. ಎನ್ಇಪಿ 2020 ದೇಶಾದ್ಯಂತ ಅತ್ಯುತ್ತಮ ಅಂತರರಾಷ್ಟ್ರೀಯ ಸಂಸ್ಥೆಗಳ ಕ್ಯಾಂಪಸ್ ಸ್ಥಾಪನೆಗೆ ದಾರಿ ಮಾಡಿಕೊಟ್ಟಿದೆ ಮತ್ತು ಇದು ಜ್ಞಾನದ ಹೊರ ಹರಿವನ್ನು ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಸಾಮಾನ್ಯ ಕುಟುಂಬಗಳ ಯುವಕರಿಗೆ ವಿಶ್ವ ದರ್ಜೆಯ ಶಿಕ್ಷಣವನ್ನು ಪಡೆಯಲು ಅವಕಾಶ ನೀಡುತ್ತದೆ” ಎಂದು ಪ್ರಧಾನಿ ಹೇಳಿದರು.
“ನಿರ್ದಿಷ್ಟ ಸ್ಟ್ರೀಮ್ಗಳಿಗಾಗಿ ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ತೆಗೆದುಹಾಕಲಾಗಿದೆ. ನಮ್ಮ ಯುವಕರು ಈಗ ಅವರ ಹಿತಾಸಕ್ತಿಗೆ ಅನುಗುಣವಾಗಿ ಕಲಿಯಲು ಸಾಧ್ಯವಾಗುತ್ತದೆ. ಈ ಮೊದಲು, ವಿದ್ಯಾರ್ಥಿಗಳು ತಮ್ಮ ಯೋಗ್ಯತೆಯನ್ನು ಮೀರಿ ಒಂದು ಸ್ಟ್ರೀಮ್ ಅನ್ನು ಆರಿಸಿಕೊಳ್ಳುತ್ತಿದ್ದರು. ಬಳಿಕ ಅದು ತನಗೆ ಹೇಳಿದ ಕೋರ್ಸು ಅಲ್ಲ ಎಂಬುದು ಅವರಿಗೆ ಅರಿವಾಗುತ್ತಿತ್ತು. ಈಗ ಅಂತಹ ಸಮಸ್ಯೆಗಳನ್ನು ದೂರ ಮಾಡಲಾಗಿದೆ” ಎಂದಿದ್ದಾರೆ.
“ಹೊಸ ಶಿಕ್ಷಣ ನೀತಿಯು ಅಧ್ಯಯನಕ್ಕಿಂತ ಹೆಚ್ಚಾಗಿ ಕಲಿಕೆಯ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಪಠ್ಯಕ್ರಮವನ್ನು ಮೀರಿ ವಿಮರ್ಶಾತ್ಮಕ ಚಿಂತನೆಗೆ ಮಹತ್ವ ನೀಡುತ್ತದೆ. ಈ ನೀತಿಯಲ್ಲಿ, ಪ್ರಕ್ರಿಯೆಗಿಂತ ಅಭಿರುಚಿ, ಪ್ರಾಯೋಗಿಕತೆ ಮತ್ತು ಕಾರ್ಯಕ್ಷಮತೆಗೆ ಹೆಚ್ಚಿನ ಒತ್ತು ನೀಡುತ್ತದೆ” ಎಂದಿದ್ದಾರೆ,.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.