ತಿರುವನಂತಪುರಂ: ಚಿನ್ನದ ಕಳ್ಳಸಾಗಣೆ ಮಾಫಿಯಾವು ಇಬ್ಬರು ಡಿಆರ್ಐ (ಕಂದಾಯ ಗುಪ್ತಚರ ನಿರ್ದೇಶನಾಲಯ) ಅಧಿಕಾರಿಗಳನ್ನು ಹತ್ಯೆ ಮಾಡಲು ಯತ್ನಿಸಿದೆ. ದ್ವಿಚಕ್ರ ವಾಹನದ ಮೇಲೆ ಬರುತ್ತಿದ್ದ ಅಧಿಕಾರಗಳ ಮೇಲೆ ಕಾರನ್ನು ಹತ್ತಿಸಲು ದುಷ್ಕರ್ಮಿಗಳು ಪ್ರಯತ್ನಿಸಿದ್ದಾರೆ. ಕಾರಿನಲ್ಲಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲು ಕಾರನ್ನು ನಿಲ್ಲಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಇಬ್ಬರು ಡಿಆರ್ಐ ಅಧಿಕಾರಿಗಳು ಗಾಯಗೊಂಡಿದ್ದು, ಕೋಝಿಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರಿನಿಂದ ನಾಲ್ಕು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮೂವರು ಕಳ್ಳಸಾಗಾಣಿಕೆದಾರರ ಮೇಲೆ ಕೊಲೆ ಯತ್ನ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಡಿರ್ಐ ತಂಡವು ಕರಿಪುರ ವಿಮಾನ ನಿಲ್ದಾಣದಿಂದ ಚಿನ್ನದ ಕಳ್ಳಸಾಗಣೆಯಾಗುತ್ತಿದೆ ಎಂಬ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದುಕೊಂಡು ಕಾರ್ಯಾಚರಣೆಗೆ ಇಳಿದಿದೆ. ವಿಮಾನ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಇವರುಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಅದು ಶಂಕಿಸಿದೆ.
ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿಗಳ ತಂಡದ ಸಮರ್ಪಣೆಯನ್ನು ಶ್ಲಾಘಿಸಿದರು ಮತ್ತು ಡಿಆರ್ಐ ಅಧಿಕಾರಿಗಳಿಗೆ ಸಂಪೂರ್ಣ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದ್ದೇವೆ ಎಂದು ಹೇಳಿದರು.
“ಈ ಸವಾಲಿನ ಕಾಲದಲ್ಲಿ ತಂಡವು ಯಾವ ಸಮರ್ಪಣೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಶ್ಲಾಘಿಸುತ್ತೇವೆ. ಸಂಪೂರ್ಣ ವೈದ್ಯಕೀಯ ಚಿಕಿತ್ಸೆಯನ್ನು ವಿಸ್ತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾರ್ಯದರ್ಶಿ, ಡಿಒಆರ್ಗೆ ನಿರ್ದೇಶನ ನೀಡಿದ್ದೇವೆ. ನೀವು ತೋರಿಸಿದ ಬದ್ಧತೆಗೆ ಭೇಷ್” ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
Appreciate the dedication with which the team is working in these challenging times. Have directed Secretary, DoR to ensure complete medical care is extended. Kudos for the commitment shown. https://t.co/VvPRkLiwHe
— Nirmala Sitharaman (@nsitharaman) September 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.