ನವದೆಹಲಿ: ಅಪೌಷ್ಟಿಕತೆ ಮುಕ್ತ ಭಾರತವನ್ನು ರೂಪಿಸುವ ಪ್ರಧಾನಿ ನರೇಂದ್ರ ಮೋದಿಯವರ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಸರ್ಕಾರಿ ಶಾಲೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಸರಿಯಾದ ಪೌಷ್ಠಿಕಾಂಶವನ್ನು ಖಾತ್ರಿಪಡಿಸಿಕೊಳ್ಳಲು ಹಾಲನ್ನು ಶೀಘ್ರದಲ್ಲೇ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡಲು ನಿರ್ಧರಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (ಡಬ್ಲ್ಯುಸಿಡಿ) ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯಗಳು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಠಿಕ ಊಟ ನೀಡುವ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಪೂರೈಸಲು ಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.
3 ನೇ ‘ರಾಷ್ಟ್ರೀಯ ಪೋಶನ್ ಮಾಸಿಕ’ದ ಸಂದರ್ಭದಲ್ಲಿ ಶಾಲೆಗಳು ಪುನರಾರಂಭಗೊಂಡ ಕೂಡಲೇ ಹಾಲು ಸೇರಿಸುವ ಮೂಲಕ ಮಧ್ಯಾಹ್ನದ ಬಿಸಿಯೂಟದಲ್ಲಿ ಬದಲಾವಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದೇಶದಿಂದ ಅಪೌಷ್ಟಿಕತೆಯನ್ನು ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪ್ರಧಾನ ಮಂತ್ರಿಯವರು 2018 ರಲ್ಲಿ ‘ಪೋಶಣ್ ಅಭಿಯಾನ್’ ಯೋಜನೆಯನ್ನು ಪ್ರಾರಂಭಿಸಿದ್ದಾರೆ.
ಇದೀಗ ಈ ಯೋಜನೆಯ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟವನ್ನು ನೀಡುವ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡುವ ಸಲುವಾಗಿ, ಶಿಕ್ಷಣ ಸಚಿವಾಲಯ ತನ್ನ ಮಾನದಂಡಗಳನ್ನು ಪರಿಷ್ಕರಿಸಿದೆ, ಇದರಲ್ಲಿ ಹಾಲನ್ನು ಅಗತ್ಯ ಪೂರಕವಾಗಿ ಒಳಪಡಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.