ನವದೆಹಲಿ: ಭಾರತ ಮತ್ತು ಚೀನಾದ ಗಡಿ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿ ನುಸುಳಿ ಭಾರತಕ್ಕೆ ಪ್ರವೇಶಿಸಲು ಚೀನಾ ಯೋಧರು ಪ್ರಯತ್ನ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿರುವುದಾಗಿಯೂ ಮೂಲಗಳು ತಿಳಿಸಿವೆ.
ಉಭಯ ದೇಶಗಳ ಸೇನೆಗಳು ಸದ್ಯ ಪಾಂಗಾಂಗ್ ಸರೋವರದ ಪ್ರದೇಶದಲ್ಲಿ ತಮ್ಮ ತುಕಡಿಗಳನ್ನು ನಿಯೋಜನೆ ಮಾಡಿವೆ. ಸದ್ಯ ಆ ಭಾಗದಲ್ಲಿ ಮತ್ತೊಮ್ಮೆ ವಿಷಮ ಪರಿಸ್ಥಿತಿ ಉಂಟಾಗಿದ್ದು, ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿರುವುದಾಗಿಯೂ ಮಾಹಿತಿ ಇದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವರದಿ ಮಾಡಿರುವ ಚೀನಾದ ಗ್ಲೋಬಲ್ ಟೈಮ್ಸ್ , ಪಾಂಗಾಂಗ್ ತ್ಸೋ ಸರೋವರದ ದಕ್ಷಿಣ ತೀರದಲ್ಲಿ ಭಾರತೀಯ ಸೈನಿಕರು ಎಲ್ಎಸಿ ದಾಟಿರುವುದಾಗಿ ತಿಳಿಸಿದೆ. ಪೂರ್ವ ಲಡಾಕ್ನ ಎಲ್ಎಸಿ ಯಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆಯೂ ಮಾಹಿತಿ ಇದೆ. ಈ ಪ್ರದೇಶದಲ್ಲಿ ಎರಡೂ ದೇಶಗಳ ಸೇನಾ ತುಕಡಿ ಮೂರು ತಿಂಗಳಿಗಿಂತಲೂ ಅಧಿಕ ಕಾಲದಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದೂ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.