ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಕಾಯಿಲೆಯ ಅವಧಿಯಲ್ಲಿ ಕೆಲಸ ಕಳೆದುಕೊಂಡವರು, ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವವರು ಮೊದಲಾದಂತೆ ಇನ್ನೂ ಅನೇಕ ತರನಾಗಿ ಆರ್ಥಿಕ ಸಂಕಷ್ಟದಿಂದ ತೊಂದರೆಗೀಡಾಗುವವರಿಗೆ ನೆರವಾಗಲು ರಾಜ್ಯ ಸರ್ಕಾರ ಇದೇ ತಿಂಗಳ 16 ರಂದು ವಿವಿಧೆಡೆ ಸಾಲ ಮೇಳವನ್ನು ಆಯೋಜನೆ ಮಾಡಿದೆ.
ಈ ಸಾಲದ ಹಣವನ್ನು ಆತ್ಮನಿರ್ಭರ ನಿಧಿಯಿಂದ ಬಿಡುಗಡೆ ಮಾಡಲಾಗುವುದಾಗಿಯೂ ಸರ್ಕಾರ ಮಾಹಿತಿ ನೀಡಿದೆ. ಈ ಸಮಾರಂಭವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟನೆ ಮಾಡುವ ಸಾಧ್ಯತೆ ಇರುವುದಾಗಿಯೂ ಮೂಲಗಳು ತಿಳಿಸಿವೆ. ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಮತ್ತು ಮೂರರಿಂದ ಹತ್ತು ಲಕ್ಷದವರೆಗಿನ ಸಾಲಕ್ಕೆ 3% ದಷ್ಟು ಬಡ್ಡಿ ವಿಧಿಸಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.
ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಸಹಕಾರಿ ಬ್ಯಾಂಕ್ಗಳು ಈ ಸಾಲವನ್ನು ನೀಡಲಿರುವುದಾಗಿಯೂ ಮಾಹಿತಿ ಇದೆ. ಬೀದಿ ಬದಿಯ ವ್ಯಾಪಾರಿಗಳು, ಮಹಿಳಾ ಸ್ವ ಸಹಾಯ ಗುಂಪುಗಳು, ಕೃಷಿ ಕಾರ್ಮಿಕರು, ಡೈರಿ, ರೇಷ್ಮೆ ಬೆಳೆಗಾರರು ಸೇರಿದಂತೆ ಇನ್ನಿತರ ಬಡ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಈ ಸಾಲ ಮೇಳ ಆಯೋಜನೆ ಮಾಡಲಾಗಿದೆ. ಬೆಂಗಳೂರು, ಕಲ್ಬರ್ಗಿಯ, ಮೈಸೂರು, ಬೆಳಗಾವಿಯಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗುವುದಾಗಿ ತಿಳಿದು ಬಂದಿದೆ. ಕೊರೋನಾ ಸಂಕಷ್ಟದಿಂದ ಬಳಲುವ ಜನರನ್ನು ಮೇಲೆತ್ತಲು ಇದೊಂದು ತಾತ್ಕಾಲಿಕ ಯೋಜನೆಯಾಗಿದೆ ಎಂದು ಸಹಕಾರ ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.