ನವದೆಹಲಿ: ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ಧಾರ್ಮಿಕ ಮತಾಂತರ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ 13 ಎನ್ಜಿಒಗಳು ಮತ್ತು ಸಂಸ್ಥೆಗಳ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ಪರವಾನಗಿಗಳನ್ನು ಕೇಂದ್ರ ಗೃಹ ಸಚಿವಾಲಯ ಅಮಾನತುಗೊಳಿಸಿದೆ ಎಂದು ವರದಿಗಳು ತಿಳಿಸಿವೆ.
ಎಫ್ಸಿಆರ್ಎ ಪರವಾನಗಿಗಳಿಲ್ಲದ ಕಾರಣ ಈ ಎನ್ಜಿಒಗಳಿಗೆ ಇನ್ನು ಮುಂದೆ ಧಾರ್ಮಿಕ ಉದ್ದೇಶಗಳಿಗಾಗಿ ಯಾವುದೇ ವಿದೇಶಿ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಜಾರ್ಖಂಡ್ ಸೇರಿದಂತೆ ಕೆಲವು ರಾಜ್ಯಗಳ ಕೆಲವು ಬುಡಕಟ್ಟು ಪ್ರದೇಶಗಳಲ್ಲಿ ಸ್ಥಳೀಯರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ಗುಪ್ತಚರ ವರದಿಗಳು ತಿಳಿಸಿದ ಹಿನ್ನೆಲೆಯಲ್ಲಿ ಗೃಹಸಚಿವಾಲಯ ಈ ಎನ್ಜಿಒಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ.
ಎನ್ಜಿಒಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು ಮತ್ತು ಆರೋಪಗಳಿಗೆ ಸ್ಪಂದಿಸುವಂತೆ ತಿಳಿಸಲಾಗಿತ್ತು. ಆದರೆ ಗೃಹಸಚಿವಾಲಯದ ಪ್ರಕಾರ, ಈ ಎನ್ಜಿಒಗಳು ನಿಗದಿತ ಕಾಲಮಿತಿಯೊಳಗೆ ಉತ್ತರಿಸಲಿಲ್ಲ. ನೋಟಿಸ್ಗೆ ತಡವಾಗಿ ಉತ್ತರಿಸಿದ ಎನ್ಜಿಒವೊಂದರ ಪ್ರತಿಕ್ರಿಯೆ ಅತೃಪ್ತಿಕರವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈಗ, 13 ಎನ್ಜಿಓಗಳಿಗೆ ಅಮಾನತು ನೋಟಿಸ್ಗೆ ಪ್ರತಿಕ್ರಿಯಿಸಲು ಆರು ತಿಂಗಳ ಸಮಯವನ್ನು ನೀಡಲಾಗಿದೆ ಮತ್ತು ಅವರ ಪ್ರತಿಕ್ರಿಯೆಗಳಿಗೆ ಅನುಗುಣವಾಗಿ, ಎಫ್ಸಿಆರ್ಎ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಅಥವಾ ಮರುಸ್ಥಾಪಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.