ಬೆಂಗಳೂರು: ನಗರದ ಯಲಹಂಕದಲ್ಲಿ ನಿರ್ಮಾಣವಾಗಿರುವ ವೀರ ಸಾವರ್ಕರ್ ಹೆಸರಿನ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದ್ದಾರೆ.
ಈ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಕಳೆದ ಬಾರಿ ಮೇ ತಿಂಗಳಲ್ಲಿ ನಡೆಯಬೇಕಿದ್ದ ಈ ಉದ್ಘಾಟನಾ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು.
ಮೇ ತಿಂಗಳ 28 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ವಿರೋಧ ಪಕ್ಷಗಳು ಸೇರಿದಂತೆ ಕೆಲವು ಸಂಘಟನೆಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು. ಅಲ್ಲದೆ ಹೆಸರು ಬದಲಿಸುವಂತೆಯೂ ಆಗ್ರಹಿಸಿದ್ದವು. ಆದರೆ ಈಗ ರಾಜ್ಯ ಸರ್ಕಾರ ಸಾವರ್ಕರ್ ಹೆಸರಿನಲ್ಲಿಯೇ ಈ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದೆ. ಈ ಮೇಲ್ಸೇತುವೆಯನ್ನು ಸೆ.1 ರಂದೇ ಉದ್ಘಾಟನೆ ನಡೆಸಲು ದಿನಾಂಕ ನಿಗದಿಯಾಗಿತ್ತಾದರೂ, ಅಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಗಲಿಕೆಯ ಕಾರಣದಿಂದ ಮತ್ತೆ ಮುಂದೂಡಲ್ಪಟ್ಟಿತ್ತು.
ಈ ಮೇಲ್ಸೇತುವೆ ನಿರ್ಮಾಣಕ್ಕೆ 34 ಕೋಟಿ ರೂ. ವೆಚ್ಚವಾಗಿದ್ದು, 8 ಮೀ. ಉದ್ದದ ಚತುಷ್ಪಥ ಮೇಲ್ಸೇತುವೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.