ಬೆಂಗಳೂರು: ನಾಡಹಬ್ಬ ದಸರಾದ ಮೇಲೆಯೂ ಕೊರೋನಾ ಕರಿನೆರಳು ಬಿದ್ದಿದೆ. ಕೋವಿಡ್ ಹಿನ್ನೆಲೆಯಲ್ಲಿ ಮೈಸೂರಿನ ದಸರಾ ಹಬ್ಬವನ್ನು ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದಾಗಿ ಮಾಹಿತಿ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆಯೊಂದು ನಡೆದಿದ್ದು, ಈ ಸಭೆಯಲ್ಲಿ ಸರಳ ದಸರಾ ಆಚರಣೆ ನಡೆಸುವುದಾಗಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಈ ಬಾರಿಯ ದಸರಾ ಹಬ್ಬದ ಆಚರಣೆಯನ್ನು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಸೀಮಿತವಾದಂತೆ ನಡೆಸಲಾಗುವ ಸಂಬಂಧವೂ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ ಆನೆಗಳ ಜಂಬೂ ಸವಾರಿಯೂ ಅರಮನೆಗೆ ಸೀಮಿತವಾಗಿ ನಡೆಯಲಿವೆ ಎಂಬುದಾಗಿಯೂ ಮೂಲಗಳು ಮಾಹಿತಿ ನೀಡಿವೆ.
ಈ ವರ್ಷದ ನಾಡಹಬ್ಬವನ್ನು ಕೊರೋನಾ ವಾರಿಯರ್ಸ್ ಕೈಯಿಂದಲೇ ಉದ್ಘಾಟಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಅರಮನೆ ಮತ್ತು ಮುಖ್ಯ ನಗರಗಳಿಗೆ ವಿದ್ಯುತ್ ದೀಪಾಲಂಕಾರ ಇರಲಿದೆ. ದಸರಾ ಸಂಬಂಧ ಮುಖ್ಯಮಂತ್ರಿಗಳಿಂದ 10 ಕೋಟಿ ರೂ. ಮತ್ತು ಎಂಯುಡಿಎ ವತಿಯಿಂದ 5 ಕೋಟಿ ರೂ. ಅನುದಾನಕ್ಕೂ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.