ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ರೋಗದೊಂದಿಗೆ ಹೋರಾಡುವಲ್ಲಿ ಮಾಧ್ಯಮಗಳ ಪಾತ್ರವನ್ನು ಶ್ಲಾಘಿಸಿದ್ದಾರೆ. ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಸರ್ಕಾರಿ ಕಾರ್ಯಗಳನ್ನು ವಿಶ್ಲೇಷಿಸುವ ಮೂಲಕ ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸುವ ಮೂಲಕ ಮಾಧ್ಯಮಗಳು ಅಭೂತಪೂರ್ವ ರೀತಿಯಲ್ಲಿ ಸೇವೆ ಸಲ್ಲಿಸಿದೆ ಎಂದು ಅವರು ಕೊಂಡಾಡಿದ್ದಾರೆ.
ಜೈಪುರದಲ್ಲಿ ಪತ್ರಿಕಾ ಗೇಟ್ ಉದ್ಘಾಟನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿ ಮಾತನಾಡಿದ ಅವರು, “ಸಮಾಜದ ಪ್ರಬುದ್ಧ ವರ್ಗ ಮತ್ತು ಬರಹಗಾರರು ಸಮಾಜದ ಮಾರ್ಗದರ್ಶಕರು ಹಾಗೂ ಶಿಕ್ಷಕರು ಇದ್ದಂತೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ದೊಡ್ಡ ವ್ಯಕ್ತಿಗಳು ಬರವಣಿಗೆಯೊಂದಿಗೆ ಜೋಡಿಸಲ್ಪಟ್ಟಿದ್ದರು” ಎಂದಿದ್ದಾರೆ.
ಹೊಸ ತಲೆಮಾರಿನವರಲ್ಲಿ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಪ್ರಧಾನಿ ಕರೆ ನೀಡಿದರು. ಮನೆ ನಿರ್ಮಿಸುವಾಗ ಪುಸ್ತಕಗಳನ್ನು ಇಡುವ ಸ್ಥಳವನ್ನು ಖಾತ್ರಿಪಡಿಸಿಕೊಳ್ಳಬೇಕು ಮತ್ತು ಕುಟುಂಬದ ಎಲ್ಲ ಸದಸ್ಯರು ಪ್ರತಿದಿನ ಏನನ್ನಾದರೂ ಓದುವ ಅಭ್ಯಾಸವನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
ದೇಶದ ಪ್ರಾಚೀನ ಸಾಹಿತ್ಯದ ಮಹತ್ವವನ್ನು ಉಲ್ಲೇಖಿಸಿದ ಪ್ರಧಾನಿ, ಟೆಕ್ಸ್ಟ್, ಟ್ವೀಟ್ ಮತ್ತು ಗೂಗಲ್ ಗುರು ಯುಗದಲ್ಲಿ ಹೊಸ ತಲೆಮಾರುಗಳು ಗಂಭೀರವಾದ ಜ್ಞಾನವನ್ನು ಪಡೆಯುವುದರಿಂದ ದೂರವಾಗುವುದಿಲ್ಲ ಎಂಬುದನ್ನು ಖಚಿತಪಡಿಸಬೇಕು. ದೇಶವು ಈಗ ವಿಶ್ವ ವೇದಿಕೆಗಳಲ್ಲಿ ಬಲವಾದ ಉಪಸ್ಥಿತಿಯನ್ನು ಹೊಂದಿರುವುದರಿಂದ ಭಾರತದ ಉತ್ಪನ್ನಗಳ ಜೊತೆಗೆ ಭಾರತದ ಧ್ವನಿಯು ಹೆಚ್ಚು ಜಾಗತಿಕವಾಗುತ್ತಿದೆ ಎಂದು ಮೋದಿ ಪ್ರತಿಪಾದಿಸಿದರು. ಜಗತ್ತು ಈಗ ಭಾರತವನ್ನು ಹೆಚ್ಚು ಗಮನಿಸುತ್ತಿದೆ ಎಂದು ಹೇಳಿದರು.
ಜೈಪುರದ ಜವಾಹರಲಾಲ್ ನೆಹರು ಮಾರ್ಗದಲ್ಲಿ ಪತ್ರಿಕಾ ಗ್ರೂಪ್ ಆಫ್ ನ್ಯೂಸ್ಪೇಪರ್ಸ್ ಈ ಪತ್ರಿಕಾ ಗೇಟ್ ಅನ್ನು ನಿರ್ಮಿಸಿದೆ. ಈ ಸಂದರ್ಭದಲ್ಲಿ ಗ್ರೂಪ್ ಅಧ್ಯಕ್ಷರು ಬರೆದ ಎರಡು ಪುಸ್ತಕಗಳನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.