ಬೆಂಗಳೂರು: ದೇಶದ ಮೊಟ್ಟ ಮೊದಲ ಸಂಯೋಜಿತ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಅವರು ನಗರದ ಜಕ್ಕೂರು ಪ್ರದೇಶದ ಏರೋಡ್ರೋಮ್ನಲ್ಲಿ ಈ ಸೇವೆಯನ್ನು ಲೋಕಾರ್ಪಣೆ ಮಾಡಿದರು. ಕೊರೋನಾ ಸಂಕಷ್ಟದ ಅವಧಿಯಲ್ಲಿ ಗಂಭೀರ ಪರಿಣಾಮ ಅನುಭವಿಸುತ್ತಿರುವ ರೋಗಿಗಳನ್ನು ಶೀಘ್ರ ಆಸ್ಪತ್ರೆಗೆ ಸೇರಿಸಲು ಪೂರಕವಾಗುವಂತೆ ಈ ಏರ್ ಆಂಬ್ಯುಲೆನ್ಸ್ ಸೇವೆಯನ್ನು ರಾಜ್ಯದಲ್ಲಿ ಆರಂಭ ಮಾಡಲಾಗಿದೆ.
ಯಾವುದೇ ರೀತಿತ ಟ್ರಾಫಿಕ್ ಕಿರಿಕಿರಿ ಇಲ್ಲದೆ ಶೀಘ್ರ ಗತಿಯಲ್ಲಿ ರೋಗಿಗಳನ್ನು ಆಸ್ಪತ್ರೆಗೆ ರವಾನಿಸಲು ಈ ವ್ಯವಸ್ಥೆ ಸಹಾಯ ಮಾಡಲಿದೆ. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.