ಬೆಂಗಳೂರು: ವಾರ್ಷಿಕ ಸಗಟು ಖರೀದಿ ಯೋಜನೆಯಡಿ ರಾಜ್ಯ ಗ್ರಂಥಾಲಯ ಇಲಾಖೆಯಿಂದ 500 ಕನ್ನಡ ಪುಸ್ತಕಗಳನ್ನು ಖರೀದಿ ಮಾಡಲು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾಸಂಸ್ಥೆಗಳಲ್ಲಿ ಮಕ್ಕಳಿಗೆ ಓದುವ ಅಭಿರುಚಿ ಹೆಚ್ಚಿಸುವ ನಿಟ್ಟಿನಲ್ಲಿ ತಿಳುವಳಿಕೆ ಮೂಡಿಸಲು ಪೂರಕ ವಾತಾವರಣ ನಿರ್ಮಾಣ ಮಾಡುವಂತೆಯೂ ಅವರು ಈ ಸಂದರ್ಭದಲ್ಲಿ ಸೂಚಿಸಿದರು. ಇದಕ್ಕಾಗಿ ಇಲಾಖೆಯೂ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು. ಪುಸ್ತಕ ಸಮಿತಿಯೂ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಲು ಪೂರಕವಾಗುವಂತೆ ಯೋಜನೆಗಳನ್ನು ಹಾಕಿಕೊಳ್ಳುವಂತೆ ಅವರು ಮನವಿ ಮಾಡಿದರು. ವಿದ್ಯಾರ್ಥಿಗಳು ಕೇವಲ ಅಧ್ಯಯನ ದೃಷ್ಟಿಯಿಂದ ಮಾತ್ರ ಪುಸ್ತಕಗಳನ್ನು ಓದದೆ, ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದಕ್ಕಾಗಿ ಅವರಲ್ಲಿ ಜ್ಞಾನ ತುಂಬಬೇಕಾಗಿದೆ ಎಂದು ಅವರು ಹೇಳಿದರು.
ಜೊತೆಗೆ ಬರಹಗಾರರ ಮತ್ತು ಪ್ರಕಾಶಕರ ಸಂಘದ ಮನವಿಯನ್ನು ಪರಿಗಣಿಸಿ ಕನ್ನಡದ 300 ಪ್ರತಿಗಳ ಖರೀದಿಯನ್ನು 500 ಪ್ರತಿಗಳ ಖರೀದಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ. ಓದುಗರಿಗೆ ಹೊಸ ಪುಸ್ತಕಗಳು ದೊರೆಯುವಂತೆ ಮಾಡಲು 2018-19 ರಲ್ಲಿ ಬಾಕಿ ಇರುವ ಪುಸ್ತಕಗಳ ಖರೀದಿಗೆ ಅನುದಾನ ಒದಗಿಸುವುದಾಗಿಯೂ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.