ಅಂಬಾಲ: ಮಿಲಿಟರಿ ಶಕ್ತಿಯನ್ನು ನಿರ್ವಹಿಸುವುದರಲ್ಲಿ ವಾಯುಸೇನೆಯು ಮಹತ್ವದ ಪಾತ್ರವನ್ನು ವಹಿಸುತ್ತದೆ. ಯಾವುದೇ ಸವಾಲುಗಳಿಂದ ದೇಶವನ್ನು ಮತ್ತು ಅದರ ಮೌಲ್ಯಗಳನ್ನು ರಕ್ಷಣೆ ಮಾಡಲು ವಾಯುಸೇನೆ ಸದಾ ಜಾಗೃತವಾಗಿರುತ್ತದೆ ಮತ್ತು ಸಿದ್ಧವಾಗಿರುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.
ರಫೇಲ್ ಯುದ್ಧ ವಿಮಾನಗಳನ್ನು ಅಂಬಾಲ ವಾಯುನೆಲೆಯಲ್ಲಿ ಭಾರತೀಯ ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿ ಮಾತನಾಡಿದ ಅವರು, ಸೇನಾಪಡೆಗಳು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿರಬೇಕು ಮತ್ತು ಸದಾ ಜಾಗೃತವಾಗಿರಬೇಕು ಎಂದು ಕರೆ ನೀಡಿದರು.
“ವಾಯು ಸೇನೆಯು ತನ್ನ ಆಸ್ತಿಗಳನ್ನು ಮುಂಚೂಣಿ ನೆಲೆಗಳಲ್ಲಿ ನಿಯೋಜನೆ ಮಾಡಿರುವುದನ್ನು ನೋಡಿದರೆ ನಮ್ಮ ವಾಯುಸೇನೆ ಸಂಪೂರ್ಣವಾಗಿ ಕಾರ್ಯಾಚರಣೆಯ ಕರ್ತವ್ಯಗಳನ್ನು ನಿರ್ವಹಿಸಲು ಸಿದ್ಧವಾಗಿದೆ ಎಂಬ ವಿಶ್ವಾಸವನ್ನು ನಮ್ಮಲ್ಲಿ ಮೂಡಿಸುತ್ತದೆ. ವಾಯುಸೇನೆ ಮಿಲಿಟರಿ ಶಕ್ತಿಯನ್ನು ನಿರ್ವಹಿಸುತ್ತದೆ ಮತ್ತು ಭವಿಷ್ಯದ ಯಾವುದೇ ಯುದ್ಧಗಳಿಗೆ ಅದರ ಕಾರ್ಯಗಳು ನಿರ್ಣಾಯಕವಾಗಿದೆ. ಪ್ರಸ್ತುತ ಗಡಿಯಲ್ಲಿನ ಪರಿಸ್ಥಿತಿ ಎಲ್ಲರ ಗಮನವನ್ನು ಸೆಳೆದಿದೆ, ಪ್ರಾಯೋಜಿತ ಭಯೋತ್ಪಾದನೆಯ ಬಗ್ಗೆ ನಾವು ನಿರ್ಲಕ್ಷ್ಯವನ್ನು ವಹಿಸಬಾರದು” ಎಂದಿದ್ದಾರೆ.
“ಉತ್ತರದ ಗಡಿಗಳಲ್ಲಿನ ಎಲ್ಲಾ ಭದ್ರತಾ ಸವಾಲುಗಳ ಬಗ್ಗೆ ನಮಗೆ ಅರಿವಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ದೇಶ ಮತ್ತು ಮೌಲ್ಯಗಳನ್ನು ರಕ್ಷಣೆ ಮಾಡಲು ನಾವು ಸಂಪೂರ್ಣ ಸಿದ್ಧವಾಗಿರಬೇಕು. ಜಾಗೃತಿಯೇ ಸುರಕ್ಷತೆಗೆ ಇರುವ ಮೊದಲ ಹೆಜ್ಜೆ” ಎಂದು ಅವರು ಹೇಳಿದ್ದಾರೆ.
ವಾಸ್ತವ ಗಡಿನಿಯಂತ್ರಣ ಪ್ರದೇಶದಲ್ಲಿ ದಕ್ಷ ಕಾರ್ಯವನ್ನು ನಡೆಸುತ್ತಿರುವ ವಾಯುಸೇನೆಯನ್ನು ರಾಜನಾಥ್ ಸಿಂಗ್ ಅವರು ಅಭಿನಂದಿಸಿದ್ದಾರೆ.
ನಮ್ಮ ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಡುತ್ತಿರುವವರಿಗೆ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಸೇರ್ಪಡೆ ಅತಿದೊಡ್ಡ ಕಠಿಣ ಸಂದೇಶ ರವಾನಿಸಿದೆ. ನಮ್ಮ ದೇಶದ ಗಡಿಭಾಗದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಅಥವಾ ನಮ್ಮ ನೆರೆಯ ದೇಶಗಳು ಉಂಟುಮಾಡಿರುವ ಪರಿಸ್ಥಿತಿ ಪರಿಗಣಿಸಿದರೆ ರಫೇಲ್ ಯುದ್ಧ ವಿಮಾನ ಸೇರ್ಪಡೆ ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.