ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಬಿಬಿಎಂಪಿ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದ 33 ಜನರಿಗೆ ‘ನಾಡಪ್ರಭು ಕೆಂಪೇಗೌಡ’ರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಬೆಂಗಳೂರು ಅಂತರರಾಷ್ಟ್ರೀಯವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲಾಗುತ್ತದೆ. ಅದರೊಂದಿಗೆ 23 ಎಕರೆ ಪ್ರದೇಶದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು. ಜೊತೆಗೆ ಕೆಂಪೇಗೌಡರು ನಿರ್ಮಾಣ ಮಾಡಿರುವ ಕೋಟೆಗಳ ಅಭಿವೃದ್ಧಿಯತ್ತಲೂ ಸರ್ಕಾರ ಗಮನ ಹರಿಸಲಿದೆ ಎಂದು ತಿಳಿಸಿದ್ದಾರೆ.
ಈ ಬಾರಿ ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ 20 ಮಂದಿಯನ್ನು ಆಯ್ಕೆ ಮಾಡಿ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತದೆ ಎಂದು ಈ ಹಿಂದೆ ಮೇಯರ್ ಎಂ. ಗೌತಮ್ ಕುಮಾರ್ ಅವರು ಹೇಳಿದ್ದರು. ಅದರಂತೆ ಕೊರೋನಾ ವಾರಿಯರ್ಸ್ ಜೊತೆಗೆ ಇತರರನ್ನು ಆಯ್ಕೆ ಮಾಡಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಮೇಯರ್ ಎಂ. ಗೌತಮ್ ಕುಮಾರ್, ಉಪಮೇಯರ್ ರಾಮ್ ಮೋಹನ್ ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಿಬಿಎಂಪಿ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ದಿನಾಚರಣೆಯಲ್ಲಿ @BBMP_MAYOR, @BBMPCOMM ಮತ್ತು ಇತರ ಗಣ್ಯರೊಂದಿಗೆ ಪಾಲ್ಗೊಂಡೆ. ಈ ಸಂದರ್ಭದಲ್ಲಿ #CoronaWarriors ಹಾಗೂ ಕೆಂಪೇಗೌಡ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು.
ನವ ಬೆಂಗಳೂರು ನಿರ್ಮಾತೃ ಎಂದೆನಿಸಿಕೊಂಡಿರುವ ಕೆಂಪೇಗೌಡರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ.
1/2 pic.twitter.com/BevnPe6WFx
— Dr. Ashwathnarayan C. N. (@drashwathcn) September 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.