ದಾವಣಗೆರೆ: ನಗರದಲ್ಲಿ ‘ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು ಆಟೋದಲ್ಲಿ ಬರೆಯಿಸಿಕೊಂಡು ಅದನ್ನು ಓಡಿಸುತ್ತಿದ್ದ ವೈದ್ಯ ಡಾ. ರವೀಂದ್ರನಾಥ ಎಂ. ಎಚ್. ಅವರನ್ನು ಕೊಪ್ಪಳದ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ವರೆಗೆ ಇವರು ಆಟೋ ಚಾಲನೆಯಿಂದಲೇ ಜೀವನ ಸಾಗಿಸುತ್ತಿದ್ದರು. ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ತೀರ್ಪು ನೀಡಿದ್ದರೂ, ಹುದ್ದೆ ನೀಡುವತ್ತ ಅಧಿಕಾರಿಗಳು ಚಿತ್ತ ಹರಿಸಿರಲಿಲ್ಲ. ಇದರಿಂದ ನೊಂದಿದ್ದ ರವೀಂದ್ರನಾಥ ಆಟೋ ಮೇಲೆ ಬರೆದು ತಮ್ಮ ನೋವನ್ನು ತೋಡಿಕೊಂಡಿದ್ದರು. ಈ ವಿಚಾರ ಸರ್ಕಾರದ ಗಮನಕ್ಕೆ ಬಂದ ತಕ್ಷಣವೇ ಪರಿಶೀಲನೆ ನಡೆಸಿ, ಇವರನ್ನು ಕೊಪ್ಪಳದ ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಿಸಿ ವರ್ಗಾವಣೆ ಮಾಡಿದೆ.
ಅವರು ಇನ್ನೆರಡು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಬಳ್ಳಾರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಲಸಿಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಟೆಂಡರ್ ಟೆಕ್ನಿಕಲ್ ಬಿಡ್ ಇವ್ಯಾಲ್ಯುಯೇಷನ್ ಸಂಬಧ ದಾಖಲೆ ಇಲ್ಲ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿತ್ತು. ಇವರು ಜಿಲ್ಲಾ ಮಟ್ಟದ ಹುದ್ದೆಗಾಗಿ ಎರಡು ಬಾರಿ ಕೆಎಟಿ ಮೊರೆ ಹೋಗಿದ್ದರು. ಈ ಸಂದರ್ಭದಲ್ಲಿ ತೀರ್ಪು ಇವರ ಪರವಾಗಿಯೇ ಬಂದಿದ್ದರೂ, ಕೆಲಸ ಮಾಡಬೇಕಾದ ಜಾಗ ನಿಗದಿ ಮಾಡಲಾಗಿರಲಿಲ್ಲ. ಇದರಿಂದ ನೊಂದು ಅಟೋ ಓಡಿಸಲು ತೊಡಗಿದ್ದರು. ಇದೀಗ ಇವರಿಗೆ ಸರ್ಕಾರ ನ್ಯಾಯ ಒದಗಿಸಿದ್ದು, ತಮ್ಮ ಕರ್ತವ್ಯವನ್ನು ಬದ್ಧತೆಯಿಂದ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2/2
ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ.
— B Sriramulu (@sriramulubjp) September 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.