ಮುಂಬಯಿ: ವಾಟ್ಸಾಪ್ ಫಾರ್ವರ್ಡ್ಗೆ ಸಂಬಂಧಿಸಿದಂತೆ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರು ಮಂದಿ ಶಿವಸೇನೆ ಸದಸ್ಯರನ್ನು ಶುಕ್ರವಾರ ಬಂಧಿಸಲಾಗಿದೆ.
ಮಾಜಿ ಅಧಿಕಾರಿಯನ್ನು ಮದನ್ ಶರ್ಮಾ ಎಂದು ಗುರುತಿಸಲಾಗಿದ್ದು, ಅವರು 65 ವರ್ಷ ವಯಸ್ಸಿನವರಾಗಿದ್ದಾರೆ. ಅವರ ಕಣ್ಣಿಗೆ ಗಾಯವಾಗಿದ್ದು, ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಶಿವಸೇನೆಯ ಸದಸ್ಯ ಕಮಲೇಶ್ ಕದಮ್ ಎಂಬಾತ ತನ್ನ ಎಂಟರಿಂದ ಹತ್ತು ಸಹಚರರ ಜೊತೆ ಸೇರಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವಾಟ್ಸಾಪ್ನಲ್ಲಿ ಬಂದ ಸಂದೇಶವನ್ನು ರವಾನಿಸಿದ ನಂತರ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. “ನಾನು ಸಂದೇಶವನ್ನು ಫಾರ್ವರ್ಡ್ ಮಾಡಿದ ಬಳಿಕ ನನಗೆ ಬೆದರಿಕೆ ಕರೆಗಳು ಬಂದಿವೆ, ನಂತರ ಎಂಟರಿಂದ ಹತ್ತು ಜನರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇಡೀ ಜೀವನವನ್ನು ನಾನು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಾ ಕಳೆದಿದ್ದೇನೆ. ಇಂತಹ ಸರ್ಕಾರ ಅಸ್ತಿತ್ವದಲ್ಲಿರಬಾರದು” ಎಂದು ಶರ್ಮಾ ಹೇಳಿದ್ದಾರೆ.
ಈ ಘಟನೆ ಉಪನಗರ ಕಂಡಿವಲಿಯ ಲೋಖಂಡ್ವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿ ನಡೆದಿದೆ. ನೌಕಾಪಡೆಯ ಮಾಜಿ ಅಧಿಕಾರಿ, ಶಿವಸೇನೆಯ ಕಮಲೇಶ್ ಕದಮ್ ಮತ್ತು ಆತನ ಸಹಚರರ ವಿರುದ್ಧ ಕಂಡಿವಲಿಯ ಸಮತಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 325 ರ ಅಡಿಯಲ್ಲಿ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.