ಮಂಗಳೂರು: ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಸುಮಾರು 56 ಮಂದಿ ಸ್ವಯಂಪ್ರೇರಿತರಾಗಿ ಕರಾವಳಿ ಕರ್ನಾಟಕದ ಮೊದಲ ಪ್ಲಾಸ್ಮಾ ಬ್ಯಾಂಕ್ನಲ್ಲಿ ಪ್ಲಾಸ್ಮಾ ದಾನ ಮಾಡುವ ಮುಖಾಂತರ, ಕೊರೋನಾ ಸೋಂಕಿನಿಂದ ಬಳಲುತ್ತಿರುವ ಇತರ ರೋಗಿಗಳ ಚಿಕಿತ್ಸೆಗೆ ಸಹಕಾರ ನೀಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಮಂಗಳೂರು ಪ್ಲಾಸ್ಮಾ ಬ್ಯಾಂಕ್ನ ಆಂಕಾಲಾಜಿಸ್ಟ್ ಮತ್ತು ಟೆಕ್ನಿಕಲ್ ಸೂಪರ್ವೈಸರ್ ಆಗಿರುವ ಉಮಾ ದಿನೇಶ್, ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಯು 28 ದಿನಗಳ ಬಳಿಕ ಪ್ಲಾಸ್ಮಾ ನೀಡಬಹುದಾಗಿದೆ. ಒಂದು ಪ್ಲಾಸ್ಮಾ 2 ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒ ಸೆಲ್ವಮಣಿ ಅವರೂ ಪ್ಲಾಸ್ಮಾ ದಾನ ಮಾಡಿದ್ದಾರೆ ಎಂದು ಉಮಾ ಮಾಹಿತಿ ನೀಡಿದ್ದಾರೆ. ಒಟ್ಟು 56 ಮಂದಿ ಈ ವರೆಗೆ ಪ್ಲಾಸ್ಮಾ ನೀಡಿದ್ದು, ಇದರಿಂದ 100 ಮಂದಿ ರೋಗಿಗಳ ಚಿಕಿತ್ಸೆ ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
18 ರಿಂದ 60 ವರ್ಷದೊಳಗಿನ ಜನರು ಪ್ಲಾಸ್ಮಾ ದಾನ ಮಾಡಬಹುದಾಗಿದ್ದು, ಪ್ರಾಥಮಿಕ ಹಂತದಲ್ಲಿ ರಕ್ತ ಪರೀಕ್ಷೆಗೆ ಒಳಪಡಬೇಕಾಗುತ್ತದೆ. ಆ ಬಳಿಕ ಅವರಿಂದ ಪ್ಲಾಸ್ಮಾ ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ. ಪ್ಲಾಸ್ಮಾ ನೀಡಲು ಮುಂದೆ ಬರುವವರು 8971010000 ಅಥವಾ 8197368528 ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.