ಬೆಂಗಳೂರು: 2021ರ ಜೂನ್ ತಿಂಗಳೊಳಗಾಗಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು ಸಂಪೂರ್ಣ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ನೀರಾವರಿ ಯೋಜನೆಗಾಗಿ ಜಲಸಂಪನ್ಮೂಲ ಇಲಾಖೆ ಅನೇಕ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಇವೆಲ್ಲದರ ಸಮರ್ಪಕ ಅನುಷ್ಠಾನಕ್ಕೆ 1.10 ಲಕ್ಷ ಕೋಟಿ ರೂ.ಗಳ ಅಗತ್ಯತೆ ಇದೆ. ಹಣದ ಕೊರತೆ ಎದುರಾದರೆ ಸಾಲ ತಂದಾದರೂ ಈ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಆದ್ದರಿಂದ ಎಷ್ಟೇ ಕಷ್ಟವಾದರೂ ಯಾವ ಯೋಜನೆಗಳನ್ನು ಹಿಂಪಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.
ಎತ್ತಿನ ಹೊಳೆ ಯೋಜನೆಯಲ್ಲಿ ಲಿಫ್ಟ್ ಕಾಂಪೊನೆಂಟ್ ಮತ್ತು ಗುರುತ್ವ ಕಾಲುವೆಯ 31 ಕಿ.ಮೀ. ವರೆಗಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ 2021 ಮುಂಗಾರು ಹಂಗಾಮಿನಲ್ಲಿ ವೇದಾ ವ್ಯಾಲಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನೂ ಸಚಿವರು ನೀಡಿದ್ದಾರೆ. ಅಂತೆಯೇ, ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ದರ ನಿಗದಿ ಸಮಸ್ಯೆ ಕುರಿತಾಗಿಯೂ ಮುಖ್ಯಮಂತ್ರಿಗ ಜೊತೆಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.