ಬೆಂಗಳೂರು: ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಹಲವು ಜನರು ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಜೊತೆಗೆ ಇನ್ನಿತರ ಕಾರಣಗಳಿಂದಲೂ ತಮ್ಮ ವಿದ್ಯಾರ್ಹತೆಗೆ ಸೂಕ್ತವಾದ ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಇಂತಹ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಹೊಸ ಯೋಜನೆ ಉದ್ಯೋಗ ಮಿತ್ರ ವೇದಿಕೆ ಸಿದ್ಧವಾಗಿದೆ.
ಫಿಡಿಲಿಟಸ್ ಕಾರ್ಪ್ ಮತ್ತು ಇತರ ಖಾಸಗಿ ಎನ್ಜಿಒ, ಕಂಪೆನಿಗಳು, ಸ್ಕಿಲ್ ಇಂಡಿಯಾ ಸರ್ಕಾರಿ ಸಹಭಾಗಿತ್ವದಲ್ಲಿ ಈ ಉದ್ಯೋಗ ಮಿತ್ರ ಯೋಜನೆಯನ್ನು ಆರಂಭ ಮಾಡಲಾಗಿದೆ. ಈ ಯೋಜನೆಯಂತೆ ಉದ್ಯೋಗಾಕಾಂಕ್ಷಿಗಳು ತಮ್ಮ ಸ್ವ ವಿವರ, ಶಿಕ್ಷಣ, ಸಿ.ವಿ. ಸೇರಿದಂತೆ ಇನ್ನಿತರ ಎಲ್ಲಾ ಮಾಹಿತಿಗಳನ್ನು ಉದ್ಯೋಗ ಮಿತ್ರ ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಇದರಲ್ಲಿ ಉದ್ಯೋಗಾಕಾಂಕ್ಷಿಗಳು ನೀಡಿದ ವಿವರವನ್ನು ಆಧಾರವಾಗಿಟ್ಟುಕೊಂಡು, ಅವರ ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಒದಗಿಸುವ ನಿಟ್ಟಿನಲ್ಲಿ ಉದ್ಯೋಗ ಮಿತ್ರ ಸಹಾಯ ಮಾಡಲಿದೆ. ಹಾಗೆಯೇ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವವರಿಗೆ ಸಂದರ್ಶನದ ಸಮಯ, ದಿನಾಂಕ ಮೊದಲಾದ ವಿಚಾರಗಳನ್ನು ಮುಂಚಿತವಾಗಿಯೇ ತಿಳಿಸಲಿದೆ. ಈ ಯೋಜನೆಗೆ ಅನುಗುಣವಾಗಿ ಪ್ರತಿ ತಿಂಗಳೂ ಉದ್ಯೋಗ ಮೇಳ ನಡೆಯಲಿದ್ದು, ಇದು ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.