ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಭಾನುವಾರ ‘ಕೋವಿಡ್ -19 ನಂತರ ನಿರ್ವಹಣಾ ಶಿಷ್ಟಾಚಾರ’ ಅನ್ನು ಬಿಡುಗಡೆ ಮಾಡಿದೆ. ಕೊರೋನಾದಿಂದ ಗುಣಮುಖರಾದ ರೋಗಿಗಳು ಅನುಸರಿಸಬೇಕಾದ ಶಿಷ್ಟಾಚಾರಗಳನ್ನು ಇದರಲ್ಲಿ ಉಲ್ಲೇಖಿಸಲಾಗಿದೆ.
ಕೊರೋನಾದಿಂದ ಚೇತರಿಸಿಕೊಂಡವರಿಗೆ ಚವನ್ಪ್ರಾಶ್ ಬಳಕೆ ಮಾಡುವಂತೆ, ಯೋಗ ಆಸನಗಳು, ನಿತ್ಯ ಗಾರ್ಗ್ಲಿಂಗ್ ಮತ್ತು ನಡಿಗೆಗಳನ್ನು ನಡೆಸುವಂತೆ ಸಲಹೆಗಳನ್ನು ನೀಡಲಾಗಿದೆ.
ಮನೆಯಲ್ಲಿಯೇ ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾದ ರೋಗಿಗಳ ಯೋಗಕ್ಷೇಮಕ್ಕಾಗಿ ಸಮಗ್ರ ವಿಧಾನದ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.
“ಎಷ್ಟು ಸಾಧ್ಯವೋ ಅಷ್ಟು ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದ ದೈನಂದಿನ ಅಭ್ಯಾಸ ಮಾಡುವುದು ಉತ್ತಮ. ವೈದ್ಯರ ಸಲಹೆಯಂತೆ ಉಸಿರಾಟದ ವ್ಯಾಯಾಮ ಕೂಡ ಪ್ರಯೋಜನಕಾರಿ. ಬೆಳಿಗ್ಗೆ ಅಥವಾ ಸಂಜೆ ಆರಾಮದಾಯಕ ವೇಗದಲ್ಲಿ ನಡೆಯುವುದು ಒಳ್ಳೆಯದು ”ಎಂದು ಸಚಿವಾಲಯ ಹೇಳಿದೆ.
ಕೋವಿಡ್-19ಗೆ ಸೂಕ್ತವಾದ ನಡವಳಿಕೆಯನ್ನು ಮುಂದುವರಿಸಿ. ಮುಖಗವಸು ಧರಿಸುವಿಕೆ, ಕೈ ಮತ್ತು ಉಸಿರಾಟದ ನೈರ್ಮಲ್ಯ, ಸಾಮಾಜಿಕ ಅಂತರ ಕಾಪಾಡುವುದು ಅಗತ್ಯ. ಸಾಕಷ್ಟು ಪ್ರಮಾಣದ ಬೆಚ್ಚಗಿನ ನೀರನ್ನು ಕುಡಿಯಿರಿ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.