ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮಾನ್ಸೂನ್ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಸಂಸತ್ತಿನ ಅಧಿವೇಶನ ಅನಿಶ್ಚಿತ ಕಾಲದಲ್ಲಿ ನಡೆಯುತ್ತಿದೆ ಎಂದು ಹೇಳಿದರು.
“ಸಂಸತ್ತಿನ ಅಧಿವೇಶನವು ವಿಭಿನ್ನ ಸಮಯದಲ್ಲಿ ಪ್ರಾರಂಭವಾಗುತ್ತಿದೆ. ಕೊರೋನಾವೂ ಇದೆ ಮತ್ತು ಕರ್ತವ್ಯವೂ ಇದೆ. ಸಂಸದರು ಕರ್ತವ್ಯದ ಹಾದಿಯನ್ನು ಆರಿಸಿಕೊಂಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಬಾರಿ ರಾಜ್ಯಸಭೆ ಮತ್ತು ಲೋಕಸಭೆ ಒಂದು ದಿನದಲ್ಲಿ ವಿವಿಧ ಸಮಯಗಳಲ್ಲಿ ನಡೆಯಲಿದೆ. ಶನಿವಾರ-ಭಾನುವಾರವೂ ಸಹ ಕಲಾಪ ನಡೆಯಲಿದೆ. ಎಲ್ಲಾ ಸಂಸದರು ಇದಕ್ಕೆ ಒಪ್ಪಿಕೊಂಡಿದ್ದಾರೆ “ಎಂದು ಪ್ರಧಾನಿ ಹೇಳಿದ್ದಾರೆ.
ವಾಸ್ತವಿಕ ನಿಯಂತ್ರಣ ರೇಖೆಯನ್ನು ಕಾಪಾಡುತ್ತಿರುವ ಸೈನಿಕರನ್ನು ಶ್ಲಾಘಿಸಿದ ಪ್ರಧಾನಿ, ರಾಷ್ಟ್ರೀಯ ಸಮಗ್ರತೆಯ ವಿಷಯ ಬಂದಾಗ ಎಲ್ಲಾ ಸಂಸದರು ಎಲ್ಎಸಿಯಲ್ಲಿ ನಿಯೋಜನೆಗೊಂಡಿರುವ ಸಶಸ್ತ್ರ ಪಡೆಗಳ ಬೆಂಬಲಕ್ಕೆ ನಿಲ್ಲುತ್ತಾರೆ. “ದೇಶವು ನಮ್ಮ ಸೈನಿಕರೊಂದಿಗೆ ನಿಂತಿದೆ ಎಂಬ ಸಂದೇಶವನ್ನು ಸಂಸತ್ತಿನ ಎಲ್ಲ ಸದಸ್ಯರು ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ” ಎಂದಿದ್ದಾರೆ.
ಕೊರೋನಾ ವೈರಸ್ ವಿರುದ್ಧ ಲಸಿಕೆ ಪಡೆಯುವವರೆಗು ಜನರು ಎಚ್ಚರಿಕೆ ವಹಿಸಬೇಕು ಎಂದು ಪಿಎಂ ಮೋದಿ ಪುನರುಚ್ಚರಿಸಿದರು. . ಲಸಿಕೆಯನ್ನು ವಿಶ್ವದ ಯಾವುದೇ ಸ್ಥಳದಲ್ಲಾದರೂ ಬೇಗನೆ ಅಭಿವೃದ್ಧಿಪಡಿಸಬೇಕೆಂದು ನಾವು ಬಯಸುತ್ತೇವೆ, ನಮ್ಮ ವಿಜ್ಞಾನಿಗಳು ಯಶಸ್ವಿಯಾಗುತ್ತಾರೆ ಮತ್ತು ಈ ಸಮಸ್ಯೆಯಿಂದ ಎಲ್ಲರನ್ನು ಹೊರತರುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ದೇಶದಲ್ಲಿ ಕೊರೋನಾವೈರಸ್ ಮಾಹಾಮಾರಿ ಕಾಣಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಈ ಹಿನ್ನಲೆಯಲ್ಲಿ ಹಲವಾರು ಮುನ್ನಚ್ಚರಿಕೆ ಕ್ರಮಗಳನ್ನು ಸಂಸತ್ತಿನಲ್ಲಿ ಕೈಗೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.