ಮೈಸೂರು: ಕೊರೋನಾ ಕಾರಣದಿಂದುಂಟಾಗಿರುವ ವೆಚ್ಚ ಸರಿದೂಗಿಸಲು ಮತ್ತು ಖರ್ಚು ಕಡಿಮೆ ಮಾಡು ನಿಟ್ಟಿನಲ್ಲಿ ಐಟಿ/ ಐಟಿಇಎಸ್ ಸಂಸ್ಥೆಗಳು ಎರಡನೇ ಹಂತದ ನಗರಗಳತ್ತ ಮುಖ ಮಾಡಿವೆ.
ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಹಲವು ಐಟಿ ಸಂಸ್ಥೆಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಅವಕಾಶವನ್ನು ಕಲ್ಪಿಸಿವೆ. ಅಲ್ಲದೆ ಕೊರೋನಾ ಅವಧಿಯಲ್ಲಿ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಮೈಸೂರಿನತ್ತ ಹಲವು ಕಂಪೆನಿಗಳು ಚಿತ್ತ ನೆಟ್ಟಿದ್ದು, ಹಲವು ಕಂಪೆನಿಗಳು ಈಗಾಗಲೇ ಕಾರ್ಯಾಚರಣೆಯನ್ನು ಆರಂಭ ಮಾಡಿವೆ. ಈ ಉದ್ದೇಶದ ಹಿಂದೆ ಕಡಿಮೆ ದರದಲ್ಲಿ ಮಾನವ ಸಂಪನ್ಮೂಲ ಕ್ರೋಢೀಕರಣಕ್ಕೂ ಅವಕಾಶವಿರುವುದನ್ನೂ ಸಂಸ್ಥೆಗಳು ಮನಗಂಡಿದ್ದು, ಈ ಹಿನ್ನೆಲೆಯಲ್ಲಿ ಮೈಸೂರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಈ ವಿಚಾರವಾಗಿ ಮಾಹಿತಿ ನೀಡಿರುವ ಸಿಐಐ ಮಾಜಿ ಅಧ್ಯಕ್ಷ ಭಾಸ್ಕರ್ ಕಾಲಾಳೆ ಸ್ಪಷ್ಟನೆಯನ್ನೂ ನೀಡಿದ್ದು, ಅಗತ್ಯ ಮಾನವ ಸಂಪನ್ಮೂಲದ ಲಭ್ಯತೆಯ ಜೊತೆಗೆ ಅನೇಕ ಸಂಸ್ಥೆಗಳು ಮೈಸೂರಿನಲ್ಲಿ ಕಾರ್ಯಾಚರಣೆ ನಡೆಸಲು ಎದುರು ನೋಡುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಂಪೆನಿಗಳು ಈಗಾಗಲೇ ಕಾರ್ಯಾಚರಣೆ ಆರಂಭ ಮಾಡಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ. ಲಿಂಗರಾಜು ಅವರು ಮಾಹಿತಿ ನೀಡಿದ್ದು, ಮೈಸೂರಿನಲ್ಲಿ ವ್ಯವಹಾರ ಆರಂಭ ಮಾಡಲು ಹನ್ನೆರಡಕ್ಕೂ ಹೆಚ್ಚು ಸಂಸ್ಥೆಗಳು ಆಸಕ್ತಿ ವಹಿಸಿ ತಮ್ಮನ್ನು ಕೋರಿಕೊಂಡಿರುವುದಾಗಿಯೂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.