ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ 70 ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೋಮವಾರ ಸೇವಾ ಸಪ್ತಾಹವನ್ನು ಪ್ರಾರಂಭಿಸಿದರು. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಇದಕ್ಕೆ ಚಾಲನೆಯನ್ನು ನೀಡಲಾಯಿತು.
‘ಸೇವಾ ಸಪ್ತಾಹ’ ಅಭಿಯಾನವು ಅಗತ್ಯವಿರುವವರಿಗೆ ಆಹಾರ, ಬಟ್ಟೆ, ರಕ್ತದಾನ ಮುಂತಾದ ವಿವಿಧ ರೀತಿಯಲ್ಲಿ ಸಹಾಯ ಮಾಡುವ ಗುರಿಯನ್ನು ಹೊಂದಿದೆ.
ಅಭಿಯಾನವನ್ನು ಪ್ರಾರಂಭಿಸಿ ಮಾತನಾಡಿದ ನಡ್ಡಾ, “ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 17 ರಂದು 70 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ನಮ್ಮ ಪ್ರಧಾನಿ ತಮ್ಮ ಜೀವನವನ್ನು ಜನರು ಮತ್ತು ದೇಶದ ಸೇವೆಗೆ ಅರ್ಪಿಸಿದ್ದಾರೆ. ಆದ್ದರಿಂದ ಸೆಪ್ಟೆಂಬರ್ 14-20 ವಾರವನ್ನು ‘ಸೇವಾ ಸಪ್ತಾಹ’ ಎಂದು ಆಚರಿಸಲು ಬಿಜೆಪಿ ನಿರ್ಧರಿಸಿದೆ” ಎಂದಿದ್ದಾರೆ.
“ಸೇವಾ ಸಪ್ತಾಹದ ಭಾಗವಾಗಿ ಕೋಟ್ಯಂತರ ಬಿಜೆಪಿ ಕಾರ್ಯಕರ್ತರು ಜನರಿಗೆ ಸೇವೆ ಸಲ್ಲಿಸಲಿದ್ದಾರೆ” ಎಂದು ಅವರು ಹೇಳಿದ್ದಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಅವರು ವಿವಿದ ಸೂಚನೆಗಳನ್ನು ರವಾನಿಸಿದ್ದಾರೆ.
‘ಸೇವಾ ಸಪ್ತಾಹ’ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ದೇಶದ ಎಲ್ಲಾ ಜಿಲ್ಲೆಗಳಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವಿಕೆ ಅಭಿಯಾನ, ರಕ್ತ ಮತ್ತು ಪ್ಲಾಸ್ಮಾ ದಾನವನ್ನು ಮಾಡಲಿದ್ದಾರೆ ಎಂದು ನಡ್ಡಾ ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯ 70 ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ, ರಕ್ತದಾನ, ಬಡವರಿಗೆ ಮತ್ತು ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಇತ್ಯಾದಿ ಕೆಲಸ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಜಡ್ಡಾ ಹೇಳಿದ್ದಾರೆ. ” ನಾವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತೇವೆ ಮತ್ತು ಅನಾರೋಗ್ಯ ಪೀಡಿತರನ್ನು ಆರೈಕೆ ಮಾಡುತ್ತೇವೆ. ಪ್ಲಾಸ್ಮಾ ದಾನಕ್ಕೆ ವಿಶೇಷ ಗಮನ ಹರಿಸಿ ರಕ್ತದಾನ ಮಾಡುವ ಅಭಿಯಾನಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.