ಆಗ್ರಾ: ಉತ್ತರ ಪ್ರದೇಶದ ಐತಿಹಾಸಿಕ ಆಗ್ರಾ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮೊಘಲ್ ವಸ್ತುಸಂಗ್ರಹಾಲಯಕ್ಕೆ ಮರಾಠಾ ನಾಯಕ ಛತ್ರಪತಿ ಶಿವಾಜಿ ಮಹಾರಾಜ್ ಅವರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಪ್ರಕಟಿಸಿದ್ದಾರೆ.
ನಗರದ ಅಭಿವೃದ್ಧಿ ಕಾರ್ಯಗಳ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಮೊಘಲರು ನಮ್ಮ ನಾಯಕರಾಗಲು ಹೇಗೆ ಸಾಧ್ಯ ಎಂದಿದ್ದಾರೆ. ಅಲ್ಲದೇ, ಗುಲಾಮ ಮನಸ್ಥಿತಿಯಿಂದ ಹೊರ ಬರಲು ನಮ್ಮ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
ಯೋಗಿ ಆದಿತ್ಯನಾಥ್ ತಮ್ಮ ಮೂರು ವರ್ಷಗಳ ಆಳ್ವಿಕೆಯಲ್ಲಿ ಅಲಹಾಬಾದ್ (ಈಗ ಪ್ರಯಾಗ್ರಾಜ್) ಸೇರಿದಂತೆ ಹಲವಾರು ಸ್ಥಳಗಳ ಹೆಸರನ್ನು ಬದಲಾಯಿಸಿದ್ದಾರೆ. ಉತ್ತರಪ್ರದೇಶದಲ್ಲಿ “ಗುಲಾಮಗಿರಿಯ ಮನಸ್ಥಿತಿಯ” ಚಿಹ್ನೆಗಳಿಗೆ ಸ್ಥಾನವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
“ಆಗ್ರಾದ ನಿರ್ಮಾಣ ಹಂತದಲ್ಲಿರುವ ವಸ್ತುಸಂಗ್ರಹಾಲಯವನ್ನು ಛತ್ರಪತಿ ಶಿವಾಜಿ ಮಹಾರಾಜ್ ಹೆಸರಿನಿಂದ ಕರೆಯಲಾಗುವುದು. ನಮ್ಮ ಹೊಸ ಉತ್ತರ ಪ್ರದೇಶದಲ್ಲಿ ಗುಲಾಮಗಿರಿಯ ಮನಸ್ಥಿತಿಯ ಸಂಕೇತಗಳಿಗೆ ಸ್ಥಳವಿಲ್ಲ. ಶಿವಾಜಿ ಮಹಾರಾಜ್ ನಮ್ಮ ನಾಯಕ. ಜೈ ಹಿಂದ್, ಜೈ ಭಾರತ್! ” ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಯೋಜನೆಗೆ ಹಿಂದಿನ ಅಖಿಲೇಶ್ ಯಾದವ್ ಸರ್ಕಾರ 2015 ರಲ್ಲಿ ಅನುಮೋದನೆ ನೀಡಿತು. ರಾಷ್ಟ್ರದ ರಾಜಧಾನಿ ದೆಹಲಿಯಿಂದ 210 ಕಿಲೋಮೀಟರ್ ದೂರದಲ್ಲಿರುವ ತಾಜ್ ಮಹಲ್ ಬಳಿ ಆರು ಎಕರೆ ಜಾಗದಲ್ಲಿ ಈ ಮ್ಯೂಸಿಯಂ ಬರಲಿದೆ. ಮ್ಯೂಸಿಯಂ ಮೊಘಲ್ ಸಂಸ್ಕೃತಿ, ಕಲಾಕೃತಿಗಳು, ವರ್ಣಚಿತ್ರಗಳು, ಪಾಕಪದ್ಧತಿ, ವೇಷಭೂಷಣಗಳು, ಮೊಘಲ್ ಯುಗ-ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಮತ್ತು ಪ್ರದರ್ಶನ ಕಲೆಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ಹೇಳಲಾಗಿತ್ತು.
16 ನೇ ಶತಮಾನದ ಮರಾಠಾ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ತನ್ನ ಜೀವನದ ಬಹುಪಾಲು ಮೊಘಲರ ವಿರುದ್ಧ ಹೋರಾಡಿದ್ದ ಮತ್ತು ಹಲವು ಯುದ್ಧ ವಿಜಯಗಳಿಗೆ ಹೆಸರುವಾಸಿಯಾಗಿದ್ದಾನೆ.
आगरा में निर्माणाधीन म्यूजियम को छत्रपति शिवाजी महाराज के नाम से जाना जाएगा।
आपके नए उत्तर प्रदेश में गुलामी की मानसिकता के प्रतीक चिन्हों का कोई स्थान नहीं।
हम सबके नायक शिवाजी महाराज हैं।
जय हिन्द, जय भारत।
— Yogi Adityanath (@myogiadityanath) September 14, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.