ನವದೆಹಲಿ: ಮುಂದಿನ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವ ಪದ್ಮ ಪ್ರಶಸ್ತಿಗಳ ಆನ್ಲೈನ್ ನಾಮನಿರ್ದೇಶನಗಳು ಮತ್ತು ಶಿಫಾರಸ್ಸುಗಳ ಅಂತಿಮ ದಿನಾಂಕ ಇಂದಾಗಿದ್ದು, ಸಂಜೆ ವೇಳೆಗೆ ಮುಕ್ತಾಯವಾಗಲಿದೆ. ನಾಮಪತ್ರಗಳನ್ನು ಆನ್ಲೈನ್ ಮೂಲಕ ಪದ್ಮ ಪ್ರಶಸ್ತಿ ಪೋರ್ಟಲ್ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.
ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಈ ಮೂರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿದ್ದು, ಅವುಗಳ ಆನ್ಲೈನ್ ನಾಮನಿರ್ದೇಶನ ಇಂದು ಅಂತ್ಯವಾಗಲಿದೆ.
ಪ್ರಶಸ್ತಿಯು ಸಾಧಕರು ಮಾಡಿರುವ ವಿಭಿನ್ನ ಕಾರ್ಯಗಳನ್ನು ಗುರುತಿಸಲು ಪ್ರಯತ್ನಿಸುತ್ತದೆ. ಕ್ಷೇತ್ರಗಳಲ್ಲಿ ಮತ್ತು ವಿಭಾಗಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಗಳನ್ನು ಪರಿಗಣಿಸಿ ಇದನ್ನು ನೀಡಲಾಗುತ್ತದೆ.
ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಪಿಎಸ್ಯುಗಳೊಂದಿಗೆ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.
ಪದ್ಮ ಪ್ರಶಸ್ತಿಗಳನ್ನು “ಪೀಪಲ್ಸ್ ಪದ್ಮ” ಆಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದ್ದು, ಆದ್ದರಿಂದ ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮಪತ್ರ ಸಲ್ಲಿಸುವಂತೆ ಕೋರಲಾಗಿದೆ.
ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸುವ ಪ್ರಯತ್ನಗಳನ್ನು ಮಾಡುವಂತೆ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು, ರಾಜ್ಯ ಸರ್ಕಾರಗಳಿಗೆ ಗೃಹ ಸಚಿವಾಲಯ ಸಲಹೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.