ನವದೆಹಲಿ: ವಿಶ್ವಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹರಿಯಾಣದ ಮುಖ್ಯ ಕಾರ್ಯದರ್ಶಿ, ಹಿರಿಯ ಅಧಿಕಾರಿ ರಾಜೇಶ್ ಖುಲ್ಲರ್ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ಈ ಮಾಹಿತಿ ತಿಳಿಸಲಾಗಿದೆ. ಇವರು 1988 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಜಪಾನ್ನ ಟೋಕಿಯೊದ ನ್ಯಾಷನಲ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್ (ಜಿಆರ್ಪಿಎಸ್) ನಿಂದ ಮಾಸ್ಟರ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಪದವಿ ಗಳಿಸಿದ್ದಾರೆ. ಇವರ ವಿಶ್ವಬ್ಯಾಂಕ್ನ ಅಧಿಕಾರಾವಧಿ ಆ. 31, 2023 ವರೆಗೆ ಇರಲಿದೆ.
2011 ರ ಫೆಬ್ರವರಿ ತಿಂಗಳಲ್ಲಿ ಖುಲ್ಲರ್ ಅವರನ್ನು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಸಚಿವಾಲಯದ ಇನ್ನೊಂದು ಆದೇಶದಲ್ಲಿ ಮನಿಲಾದ ಏಷ್ಯಾ ಅಭಿವೃದ್ಧಿ ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಸಮೀರ್ ಕುಮಾರ್ ಖುರೆ ಅವರನ್ನು ನೇಮಿಸಿರುವುದಾಗಿ ಮಾಹಿತಿ ಇದೆ. ಇವರ ಅಧಿಕಾರಾವಧಿಯೂ ಮೂರು ವರ್ಷ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.