ಬೆಂಗಳೂರು: ಸೆ. 17 ಗುರುವಾರದಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನವದೆಹಲಿಗೆ ತೆರಳಲಿದ್ದಾರೆ. ಅಂದು ಸಿಎಂ ತಮ್ಮ ಕಲಬುರ್ಗಿ ಭೇಟಿ ಮುಗಿಸಿ ಬಳಿಕ ಅಲ್ಲಿಂದ ನವದೆಹಲಿಗೆ ವಿಮಾನದಲ್ಲಿ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಒಟ್ಟು ಮೂರು ದಿನಗಳ ಕಾಲ ಸಿಎಂ ನವದೆಹಲಿ ಪ್ರವಾಸದಲ್ಲಿ ಇರಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ, ಹಲವು ಕಾಮಗಾರಿಗಳಿಗೆ ಕುರಿತಂತೆ ಸಂಬಂಧಪಟ್ಟ ಸಚಿವರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ನೆರೆ ಪರಿಹಾರವಾಗಿ ರಾಜ್ಯಕ್ಕೆ 8 ಸಾವಿರ ಕೋಟಿ ರೂ. ಗಳ ಅನುದಾನವನ್ನು ನೀಡುವಂತೆ ಕೇಂದ್ರದ ಬಳಿ ಮನವಿ ಸಲ್ಲಿಸಲಿದ್ದಾರೆ. ಜಿಎಸ್ಟಿ ಮೊತ್ತದ ಬಗೆಗೂ ಈ ಭೇಟಿಯಲ್ಲಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಆಕಾಂಕ್ಷಿಗಳ ಪಟ್ಟಿಯನ್ನು ಈ ಸಂದರ್ಭದಲ್ಲಿ ಒಯ್ಯಲಿದ್ದು ಹೈಕಮಾಂಡ್ಗೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.