ನವದೆಹಲಿ: ಕೋವಿಡ್ ಸಂಕಷ್ಟ ದೇಶದಲ್ಲಿ ಇನ್ನೂ ಮುಗಿದಿಲ್ಲ. ಅದರ ನಿಯಂತ್ರಣಕ್ಕೆ ಅಗತ್ಯವೆನಿಸಿದ ಮುಂಜಾಗ್ರತಾ ಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುತ್ತಲೇ ಇದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಅವರು ರಾಜ್ಯಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ತಿಳಿಸಿದ್ದಾರೆ.
ವಿಶ್ವಕ್ಕೆ ಹೋಲಿಸಿದರೆ ಭಾರತದಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಸೋಂಕಿತರಿದ್ದಾರೆ. ಹತ್ತು ಲಕ್ಷಕ್ಕೆ 3,320 ಜನರಿಗೆ ದೇಶದಲ್ಲಿ ಕೊರೋನಾ ಹರಡುತ್ತಿದೆ. ಸಾವಿನ ಪ್ರಮಾಣವೂ ಕಡಿಮೆ ಇದೆ ಎಂದು ತಿಳಿಸಿದ್ದಾರೆ.
ಕೊರೋನಾ ಲಾಕ್ಡೌನ್ನಿಂದಾಗಿ ಕೊರೋನಾ ಪ್ರಕರಣಗಳು ಹೆಚ್ಚಾಗುವುದನ್ನು ಗಣನೀಯ ಪ್ರಮಾಣದಲ್ಲಿ ತಡೆಯಲಾಗಿದೆ. ಜೊತೆಗೆ ಸಾವಿನ ಪ್ರಮಾಣವೂ ನಿಯಂತ್ರಿಸಲು ಸಾಧ್ಯವಾಗಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ವೈದ್ಯಕೀಯ ಸಲಕರಣೆಗಳನ್ನು ಭಾರತದಲ್ಲಿಯೇ ತಯಾರಿಸುವತ್ತಲೂ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಪ್ರತಿದಿನ ಹತ್ತು ಲಕ್ಷ ಜನರಿಗೆ ಕೊರೋನಾ ಟೆಸ್ಟ್ ನಡೆಸಲಾಗುತ್ತಿದೆ. ಅಂದರೆ ದಿನಕ್ಕೆ ಹತ್ತು ಲಕ್ಷ ಜನರಲ್ಲಿ 720 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದಂತಾಗುತ್ತಿದೆ. ವಿಶ್ವಸಂಸ್ಥೆ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.