ಮುಂಬಯಿ: ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರ್ ರಿಲೇಶನ್ಸ್ (ಐಸಿಸಿಆರ್) ನ 70 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐಸಿಸಿಆರ್ ನ ಇತರ ಸಂಸ್ಕೃತಿ ಕಾರ್ಯಕ್ರಮಗಳಲ್ಲಿ ಭಾರತೀಯ ಸಿನೆಮಾ ಕೂಡ ಸೇರ್ಪಡೆಯಾಗುತ್ತಿದೆ. ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ ಐಸಿಸಿಆರ್ನಲ್ಲಿ ಸಂಸ್ಕೃತಿ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ. ಅಧ್ಯಕ್ಷ ಡಾ.ವಿನಯ್ ಸಹಸ್ರಬುದ್ಧೆ ಅವರು ಅಗ್ನಿಹೋತ್ರಿ ನೇಮಕವನ್ನು ಔಪಚಾರಿಕಗೊಳಿಸಿದ್ದಾರೆ. ಅಗ್ನಿಹೋತ್ರಿ ಭಾರತದ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಮಂಡಳಿಯ ಸದಸ್ಯರೂ ಆಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅಗ್ನಿಹೋತ್ರಿ, “ಸಿನೆಮಾವನ್ನು ಒಳಗೊಂಡಂತೆ ವಿಶ್ವದಾದ್ಯಂತ ಶ್ರೇಷ್ಠ ಭಾರತೀಯ ಸಂಸ್ಕೃತಿಯನ್ನು ಪ್ರಚುರಪಡಿಸುವ ಭಾರತದ ಅತ್ಯುನ್ನತ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರ್ ರಿಲೇಶನ್ಸ್ (ಐಸಿಸಿಆರ್)ನಲ್ಲಿ ಸಂಸ್ಕೃತಿ ಪ್ರತಿನಿಧಿಯಾಗಿ ನೇಮಕವಾಗಿರುವುದಕ್ಕೆ ಅತ್ಯಂತ ಗೌರವವೆನಿಸುತ್ತಿದೆ ಮತ್ತು ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು ನಿಜಕ್ಕೂ ಹೆಮ್ಮೆ. ಜಾಗತಿಕವಾಗಿ ಸಾಂಸ್ಕೃತಿಕ ಪ್ರಚಾರದಲ್ಲಿ ಚಲನಚಿತ್ರೋದ್ಯಮವನ್ನು ಪ್ರತಿನಿಧಿಸುವ ಸಾಂಸ್ಕೃತಿಕ ರಾಯಭಾರಿಯಾಗಿ ನನ್ನ ಕರ್ತವ್ಯವನ್ನು ಅತ್ಯುತ್ತಮ ಸಾಮರ್ಥ್ಯದಿಂದ ನಿರ್ವಹಿಸುತ್ತೇನೆ” ಎಂದಿದ್ದಾರೆ.
ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಅನ್ನು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು 1950 ರಲ್ಲಿ ಸ್ಥಾಪಿಸಿದರು. ಭಾರತದ ಬಾಹ್ಯ ಸಾಂಸ್ಕೃತಿಕ ಸಂಬಂಧಗಳಿಗೆ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯಕ್ರಮಗಳ ಸೂತ್ರೀಕರಣ ಮತ್ತು ಅನುಷ್ಠಾನದ ಇದರ ಮುಖ್ಯ ಉದ್ದೇಶವನ್ನು ಇದು ಒಳಗೊಂಡಿದೆ. ಭಾರತ ಮತ್ತು ಇತರ ದೇಶಗಳ ನಡುವೆ ಸಾಂಸ್ಕೃತಿಕ ಸಂಬಂಧಗಳು ಮತ್ತು ಪರಸ್ಪರ ತಿಳುವಳಿಕೆಯನ್ನು ಬೆಳೆಸಲು ಮತ್ತು ಬಲಪಡಿಸಲು, ಇತರ ದೇಶಗಳು ಮತ್ತು ಜನರೊಂದಿಗೆ ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸಲು ಮತ್ತು ರಾಷ್ಟ್ರಗಳೊಂದಿಗೆ ಸಂಬಂಧವನ್ನು ಬೆಳೆಸಲು ಇದು ಕಾರ್ಯನಿರವಹಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.