ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ವರ್ಚುವಲ್ ಸಭೆಯಿಂದ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ ಪಾಕಿಸ್ಥಾನದ ಭೂಪಟದಲ್ಲಿ ಭಾರತದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಪ್ರದರ್ಶಿಸಿದ್ದು.
ಭಾರತ ಮಾತ್ರವಲ್ಲ ಇತರ ಏಳು ಎಸ್ಸಿಒ ರಾಷ್ಟ್ರಗಳ ಪ್ರತಿನಿಧಿಗಳು ಕೂಡ ಪಾಕ್ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿ ಮಂಗಳವಾರ ನಡೆದ ವಿಡಿಯೋ ಕಾನ್ಫರೆನ್ಸ್ನಿಂದ ಹೊರ ಹೋಗಿದ್ದಾರೆ.
ಸಭೆಯಲ್ಲಿ ಪಾಕಿಸ್ಥಾನದ ಪ್ರತಿನಿಧಿ ಮೂವೀಸ್ ಯೂಸುಫ್ ಅವರ ಆಸನದ ಹಿಂಭಾಗದಲ್ಲಿ ಭಾರತದ ಗಡಿ ಪ್ರದೇಶಗಳನ್ನು ಒಳಗೊಂಡ ಭೂಪಟವನ್ನು ಪ್ರದರ್ಶಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗುಜರಾತಿನ ಜುನಾಗಢ ಪ್ರದೇಶವನ್ನು ಈ ಪಾಕ್ ಭೂಪಟ ಒಳಗೊಂಡಿತ್ತು. ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಕೆಲ ಸಮಯದ ಹಿಂದೆ ಭಾರತದ ಗಡಿ ಭಾಗಗಳನ್ನು ಸೇರಿಸಿದ ಈ ಭೂಪಟವನ್ನು ಬಿಡುಗಡೆ ಮಾಡಿದ್ದರು.
ಪಾಕಿಸ್ಥಾನದ ಈ ವರ್ತನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪ್ರತಿಭಟನೆಯನ್ನು ವ್ಯಕ್ತಪಡಿಸಿ ಶಾಂಘೈ ಸಹಕಾರ ಸಂಘಟನೆಯ ವರ್ಚುವಲ್ ಸಭೆಯಿಂದ ಹೊರ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.