ನವದೆಹಲಿ: 1978ರಲ್ಲಿ ತಮಿಳುನಾಡಿನಿಂದ ಕಳವಾಗಿ, ಯುನೈಟೆಡ್ ಕಿಂಗ್ಡಮ್ ಸೇರಿದ್ದ ರಾಮ, ಸೀತೆ, ಲಕ್ಷ್ಮಣರ ವಿಗ್ರಹಗಳನ್ನು ಅಲ್ಲಿನ ಅಧಿಕಾರಿಗಳು ಭಾರತಕ್ಕೆ ಹಿಂದಿರುಗಿಸಿರುವುದಾಗಿ ಸಾಂಸ್ಕೃತಿಕ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ತಿಳಿಸಿದ್ದಾರೆ.
ಸತತ ಪ್ರಯತ್ನದ ಫಲವಾಗಿ 42 ವರ್ಷಗಳ ಬಳಿಕ ಈ ಅಮೂಲ್ಯ ವಿಗ್ರಹಗಳು ಭಾರತವನ್ನು ಸೇರಿರುವುದು ನಿಜಕ್ಕೂ ಸಂತೋಷದಾಯಕ ಸಂಗತಿಯಾಗಿದೆ.
ಈ ವಿಗ್ರಹಗಳು 15ನೇ ಶತಮಾನದ ವಿಜಯನಗರಕ್ಕೆ ಸೇರಿದವುಗಳಾಗಿವೆ. ಇವುಗಳನ್ನು ಕದ್ದು ಅಕ್ರಮವಾಗಿ ಯುಕೆಗೆ ಸಾಗಿಸಲಾಗಿತ್ತು. ಸದ್ಯ ಯುಕೆ ಈ ವಿಗ್ರಹಗಳು ಮತ್ತು ಒಂದು ಸ್ತಂಭವನ್ನು ಭಾರತಕ್ಕೆ ಹಸ್ತಾಂತರ ಮಾಡಿದೆ. ಲಂಡನ್ನ ಭಾರತೀಯ ಹೈಕಮಿಷನ್ ಸಹಕಾರದಿಂದ ಈ ವಿಗ್ರಹಗಳು ಮತ್ತೆ ಭಾರತ ಸೇರುವಂತಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2014ರಿಂದ ಈ ವರೆಗೆ ಈ ಹಿಂದೆ ಕಳವಾಗಿದ್ದ ಸುಮಾರು 40 ಪ್ರಾಚೀನ ವಿಗ್ರಹಗಳನ್ನು ಭಾರತಕ್ಕೆ ತಂದಿದೆ. ಇಪ್ಪತ್ತು ವರ್ಷಗಳ ಹಿಂದೆ ಕಳವಾಗಿದ್ದ 9ನೇ ಶತಮಾನದ ಶಿವನ ವಿಗ್ರಹವನ್ನು ಆಗಸ್ಟ್ ತಿಂಗಳಲ್ಲಿ ಲಂಡನ್ ಭಾರತಕ್ಕೆ ಹಸ್ತಾಂತರ ಮಾಡಿತ್ತು. ಇದೀಗ ಮತ್ತೆ ಮೂರು ಪ್ರಾಚೀನ ವಿಗ್ರಹಗಳು ಭಾರತ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.