ನವದೆಹಲಿ: ಭಾರತದ ಯಶಸ್ವಿ ಪ್ರಧಾನ ಮಂತ್ರಿ ಮೋದಿ ತಮ್ಮ ಮೊದಲ ಮತ್ತು ಎರಡನೇ ಕಾರ್ಯಾವಧಿಯಲ್ಲಿ ಸದಾ ರೈತರು, ಬಡವರು, ಕಾರ್ಮಿಕರು, ವಂಚಿತರು ಮತ್ತು ದೀನದಲಿತ ಜನರನ್ನು ಮುಖ್ಯವಾಹಿನಿಗೆ ಕರೆತರುವ, ಅವರ ಸೇವೆ ಮಾಡುವ,, ಅವರನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ಅವರನ್ನು ಸಶಕ್ತಗೊಳಿಸುವಂತಹ ಕಾರ್ಯಕ್ರಮಗಳು ಮತ್ತು ನಿಯಮಗಳನ್ನು ರೂಪಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
ಮೋದಿ ಸರ್ಕಾರದ ಎಲ್ಲಾ ನೀತಿಗಳು ಸಮಾಜದ ಹಿಂದುಳಿದ ವರ್ಗಗಳ ಸಬಲೀಕರಣದ ಸುತ್ತ ಕೇಂದ್ರೀಕೃತವಾಗಿವೆ. ಬಡವರು, ಹಿಂದುಳಿದವರು ಮತ್ತು ರೈತರು ಎಲ್ಲಾ ನೀತಿಗಳ ಭಾಗವಾಗಿದ್ದಾರೆ ಎಂದಿದ್ದಾರೆ.
20 ಲಕ್ಷ ಕೋಟಿ ರೂ.ಗಳ ಆತ್ಮನಿರ್ಭರ ಭಾರತ ಪ್ಯಾಕೇಜ್ನಲ್ಲಿ 1 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಉತ್ಪನ್ನ ಮತ್ತು ಅದರ ಮೌಲ್ಯವರ್ಧನೆಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಾರಿ ಸಂಸತ್ತಿನ ಮುಂದೆ ರೈತರನ್ನು ಗಮನದಲ್ಲಿಟ್ಟುಕೊಂಡ ಮೂರು ಮಸೂದೆಗಳು ಇವೆ. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ 2020 ಅನ್ನು ನಾಳೆ ಲೋಕಸಭೆಯಲ್ಲಿ ಚರ್ಚೆ ನಡೆಸಿ ಅಂಗೀಕರಿಸಲಾಗುತ್ತದೆ. ಅದೇ ರೀತಿಯಲ್ಲಿ, ರೈತ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ಬೆಲೆ ಖಾತ್ರಿ ಮೇಲಿನ ರೈತರ ಸಬಲೀಕರಣ ಮತ್ತು ಸಂರಕ್ಷಣಾ ಕಾಯ್ದೆಗಳ ಬಗ್ಗೆ ಪ್ರಸ್ತುತ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸಲಾಗುತ್ತಿದ್ದು, ಈ ಮೂರು ಮಸೂದೆಗಳು ದೂರದೃಷ್ಟಿಯಿಂದ ಕೂಡಿವೆ ಎಂದಿದ್ದಾರೆ.
ಈ ಮೂರು ಮಸೂದೆಗಳು ಕೃಷಿ ಕ್ಷೇತ್ರದಲ್ಲಿ ಹೂಡಿಕೆಯನ್ನು ಹೆಚ್ಚಿಸಲು ಬಹಳ ಮುಖ್ಯ ಮತ್ತು ಪ್ರಯೋಜನಕಾರಿಯಾಗಿದೆ. ಈ ಮೂರು ಮಸೂದೆಗಳು ರೈತರ ಉತ್ಪನ್ನಗಳ ಬೆಲೆಯನ್ನು ಕ್ಷಿಪ್ರವಾಗಿ ವೃದ್ಧಿಸಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.