ಕೊಯಂಬತ್ತೂರ್: ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ತಮಿಳುನಾಡಿನ ಕೊಯಂಬತ್ತೂರಿನ ಶಿವಂ ಕಾಮಾಚಿ ಅಮ್ಮನ್ ದೇಗುಲಕ್ಕೆ 70 ಕೆಜಿ ಲಡ್ಡು ಅರ್ಪಣೆ ಮಾಡಿದ್ದಾರೆ. ಬಳಿಕ ಈ ಲಡ್ಡುವನ್ನು ಜನರಿಗೆ ವಿತರಣೆ ಮಾಡಲಾಗಿದೆ.
ಪ್ರಧಾನಿಯವರ ಹುಟ್ಟುಹಬ್ಬವನ್ನು ಆಚರಿಸಲು, ಬಿಜೆಪಿ ಕಾರ್ಯಕರ್ತರು ದೇಗುಲದ ಹೊರಗಡೆ ಮೆರವಣಿಗೆ ನಡೆಸಿದ್ದಾರೆ. ಬಳಿಕ ದೇಗುಲಕ್ಕೆ ಅರ್ಪಣೆ ಮಾಡಿದ ಲಡ್ಡುವನ್ನು ಜನರಿಗೆ ವಿತರಣೆ ಮಾಡಿದ್ದಾರೆ. ಸಂಭ್ರಮಾಚರಣೆಯ ಭಾಗವಾಗಿ ಕಾರ್ಯಕರ್ತರು ವಿವಿಧ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ರೇಷನ್ ಹಂಚಿಕೆ, ರಕ್ತದಾನ ಶಿಬಿರ, ಕಣ್ಣು ತಪಾಸಣೆ ಶಿಬಿರಗಳನ್ನು ಆಯೋಜಿಸಿದ್ದಾರೆ.
ಸೆಪ್ಟೆಂಬರ್ 14ರಂದು ಬಿಜೆಪಿಯು ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ‘ಸೇವಾ ಸಪ್ತಾಹ’ವನ್ನು ಆರಂಭ ಮಾಡಿದೆ.
ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದೇಶಾದ್ಯಂತ ಹಲವಾರು ಸಾಮಾಜಿಕ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಅಭಿಯಾನವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಚಪ್ರೌಲಿ ಗ್ರಾಮದಲ್ಲಿ ಪ್ರಾರಂಭಿಸಿದರು. ಅಭಿಯಾನ ಸೆಪ್ಟೆಂಬರ್ 20 ರವರೆಗೆ ಮುಂದುವರಿಯುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.