ಬೆಂಗಳೂರು: ಶೀಘ್ರದಲ್ಲೇ ಉಪನ್ಯಾಸಕ ವರ್ಗಾವಣೆ ಕಾಯ್ದೆ 2016 ನ್ನು ಹಿಂಪಡೆದು ತಿದ್ದುಪಡಿ ಮಸೂದೆಯನ್ನು ಸದ್ಯದಲ್ಲೇ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳ ಸದಸ್ಯರ ಜೊತೆಗೆ ಸಮಾಲೋಚನೆ ನಡೆಸಿ ಬಳಿಕ ಈ ಮಾಹಿತಿ ನೀಡಿದರು. ಕಾಯ್ದೆಯಲ್ಲಿ ಹಲವು ತಿದ್ದುಪಡಿ ಮಾಡಿ ಕಳೆದ ಅಧಿವೇಶನದಲ್ಲಿಯೇ ಇದನ್ನು ಮಂಡಿಸುವ ಉದ್ದೇಶವಿತ್ತು. ಆದರೆ ಕಾಯ್ದೆಯಲ್ಲಿ ಹಲವು ದೋಷಗಳಿದ್ದ ಕಾರಣ ಅದನ್ನು ಹಿಂಪಡೆಯಲಾಯಿತು ಎಂದು ಅವರು ಹೇಳಿದ್ದಾರೆ.
ಜೊತೆಗೆ ರಾಜ್ಯದ ವಿವಿ ಗಳ ಕುಲಸಚಿವರ ಹುದ್ದೆಗಳಿಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಲು ಸುಗ್ರೀವಾಜ್ಞೆ ತರಲಾಗಿದ್ದು, ಅದಕ್ಕೂ ಒಪ್ಪಿಗೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ವೈ. ಎ. ನಾರಾಯಣ್ ಸ್ವಾಮಿ, ಸೇವಾ ಹಿರಿತನಕ್ಕೆ ಬದಲಾಗಿ ಕಾರ್ಯದಕ್ಷತೆಯ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಿಸಿದಲ್ಲಿ ಉತ್ತಮ ಎಂದು ಸಲಹೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.