ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಡ್ರಗ್ಸ್ ಮಾಫಿಯಾ ಇರಲಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಗರದ ಬಿಜೆಪಿ ಜಿಲ್ಲಾ ಘಟಕದ ಕಛೇರಿಯಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಡ್ರಗ್ಸ್ ಜಾಲ ಇರಲಿಲ್ಲವೇ?, ಯು.ಟಿ. ಖಾದರ್, ರಮಾನಾಥ ರೈ ಅವರುಗಳು ಸಚಿವರಾದ ಸಂದರ್ಭದಲ್ಲಿ ಡ್ರಗ್ಸ್ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ಏಕೆ ಮಾಡಿಲ್ಲ? ಎಂದು ಪ್ರಶ್ನಿಸಿದರು. ಅಲ್ಲದೆ ಮಂಗಳೂರಿನ ಮಾಜಿ ಮೇಯರ್ ಒಬ್ಬರ ಪುತ್ರ ಮಾದಕ ಜಾಲ ಮಾಫಿಯಾದಲ್ಲಿ ಇರುವುದು ತಿಳಿದಿರಲಿಲ್ಲವೇ ಎಂದು ನಳಿನ್ ಕಾಂಗ್ರೆಸ್ ಅನ್ನು ಪ್ರಶ್ನಿಸಿದರು.
ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾಗಿ ರಮಾನಾಥ ರೈ ಅವರಿದ್ದ ಸಂದರ್ಭದಲ್ಲಿ ಇಲ್ಲಿ ಕೊಲೆಗಳು ನಡೆದಿದ್ದವು. ಅವರ ಬೆಂಬಲಿಗರೇ ಮರಳು ಮಾಫಿಯಾದಲ್ಲಿ ಇದ್ದರು ಎಂದಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿ ಇಂತಹ ದುರಂತಗಳು ಕಡಿಮೆಯಾಗಿವೆ. ಮಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಪಬ್ಗಳಿಗೂ ಪರವಾನಗಿ ನೀಡುವುದಿಲ್ಲ. ಜೊತೆಗೆ ಅಕ್ಟೋಬರ್ ತಿಂಗಳಲ್ಲಿ ನೂತನ ಮರಳು ನೀತಿಯನ್ನು ಜಾರಿಗೆ ತರಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.