ನವದೆಹಲಿ: 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಘಟನೆಗಳು 54%ರಷ್ಟು ಇಳಿದಿವೆ ಎಂದು ಗೃಹ ಸಚಿವಾಲಯ ಬುಧವಾರ ಹೇಳಿದೆ.
2018 ರ ಆಗಸ್ಟ್ 5 ಮತ್ತು 2020 ರ ಸೆಪ್ಟೆಂಬರ್ 9 ರ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ 211 ಭಯೋತ್ಪಾದಕ ಸಂಬಂಧಿತ ಘಟನೆಗಳು ನಡೆದಿವೆ. 2018-19ರ ನಡುವೆ ಇದೇ ಅವಧಿಯಲ್ಲಿ 455 ಭಯೋತ್ಪಾದನಾ ಘಟನೆಗಳು ನಡೆದಿತ್ತು ಎಂದು ರಾಜ್ಯಸಭೆಗೆ ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ತಿಳಿದ್ದಾರೆ.
“ಆಗಸ್ಟ್ 5, 2019ರಿಂದ ದೇಶದ ಒಳಗೆ ಯಾವುದೇ ದೊಡ್ಡ ಭಯೋತ್ಪಾದಕ ದಾಳಿ ನಡೆದಿಲ್ಲ” ಎಂದಿದ್ದಾರೆ.
“ಸರ್ಕಾರವು ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಳವಡಿಸಿಕೊಂಡಿದೆ ಮತ್ತು ಭದ್ರತಾ ಉಪಕರಣಗಳನ್ನು ಬಲಪಡಿಸುವುದು, ರಾಷ್ಟ್ರ ವಿರೋಧಿ ಅಂಶಗಳ ವಿರುದ್ಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು, ಎದುರಾಗುವ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ತೀವ್ರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳು ಮುಂತಾದ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಭಯೋತ್ಪಾದಕ ಸಂಘಟನೆಗಳನ್ನು ಮಟ್ಟ ಹಾಕುವ ಕಾರ್ಯ ನಿರಂತರವಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.
“ಭಯೋತ್ಪಾದಕರಿಗೆ ಬೆಂಬಲ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಮೇಲೆ ಭದ್ರತಾ ಪಡೆಗಳು ನಿಗಾ ಇಡುತ್ತವೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದು ರೆಡ್ಡಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ 49 ಭದ್ರತಾ ಸಿಬ್ಬಂದಿಯೊಂದಿಗೆ 45 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.