ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಜುನೈದ್ ಸೆಹ್ರೈ ಸೇರಿದಂತೆ ಈ ವರ್ಷ ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದ ಏಳು ಕಾರ್ಯಾಚರಣೆಗಳಲ್ಲಿ 16 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಹಾನಿರ್ದೇಶಕರು (ಡಿಜಿಪಿ) ದಿಲ್ಬಾಗ್ ಸಿಂಗ್ ಗುರುವಾರ ಹೇಳಿದ್ದಾರೆ.
“ಇಡೀ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ 72 ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಇದರಲ್ಲಿ 177 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ, ಇದರಲ್ಲಿ ಜಮ್ಮು ಪ್ರದೇಶದಲ್ಲಿ 12 ಮಂದಿ ಸೇರಿದ್ದಾರೆ” ಎಂದು ಅವರು ಹೇಳಿದ್ದಾರೆ.
ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಗುರುವಾರ ಬಟ್ಮಾಲೂದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಇದರಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಸಿಆರ್ಪಿಎಫ್ನ ಡೆಪ್ಯೂಟಿ ಕಮಾಂಡೆಂಟ್ ಗಾಯಗೊಂಡಿದ್ದರೆ, ಕೌಸರ್ ರಿಯಾಜ್ ಎಂಬ ಮಹಿಳೆ ಗುಂಡಿನ ವಿನಿಮಯದ ಸಂದರ್ಭ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
“ಮಹಿಳೆಯ ಸಾವು ದುರದೃಷ್ಟಕರ, ಅವರ ಕುಟುಂಬಕ್ಕೆ ನಾವು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಶ್ರೀನಗರದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಬಗ್ಗೆ ವಿವರಗಳನ್ನು ನೀಡಿದ ಡಿಜಿಪಿ, ಈ ವರ್ಷ ಇಲ್ಲಿಯವರೆಗೆ ಶ್ರೀನಗರದಲ್ಲಿ ಏಳು ಕಾರ್ಯಾಚರಣೆಗಳು ನಡೆದಿದ್ದು, 16 ಭಯೋತ್ಪಾದಕರು ಹತರಾಗಿದ್ದಾರೆ, ಇದರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಉನ್ನತ ಕಮಾಂಡರ್ ಜುನಿಯಾದ್ ಸೆಹ್ರೈ ಸೇರಿದ್ದಾನೆ ಎಂದಿದ್ದಾನೆ.
“ಈ ವರ್ಷ ಕೊಲ್ಲಲ್ಪಟ್ಟ 16 ಭಯೋತ್ಪಾದಕರಲ್ಲಿ ಐವರು ಶ್ರೀನಗರಕ್ಕೆ ಸೇರಿದವರಾಗಿದ್ದರೆ, ಉಳಿದವರು ಇತರ ಜಿಲ್ಲೆಯವರು” ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ, ಜಮ್ಮು-ಕಾಶ್ಮೀರದದ ಭದ್ರತಾ ಪಡೆಗಳಿಗೆ 2020 ಯಶಸ್ವಿ ವರ್ಷವಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.