ನವದೆಹಲಿ: ಕೇಂದ್ರ ಸರಕಾರವು ಗುರುವಾರ ಲೋಕಸಭೆಯಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ಮೂರು ಮಹತ್ವದ ಮಸೂದೆಗಳನ್ನು ಅನುಮೋದಿಸಿದೆ. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವ್ಯವಹಾರಗಳ ಮಸೂದೆ, ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, ಅಗತ್ಯವಸ್ತುಗಳ ತಿದ್ದುಪಡಿ ಮಸೂದೆಗಳು ಲೋಕಸಭೆಯ ಅನುಮೋದನೆ ಪಡೆದುಕೊಂಡಿವೆ.
ಮಸೂದೆಗಳ ಅನುಮೋದನೆಯಿಂದ ರೈತರಿಗೆ ದೇಶದ ಯಾವುದೇ ಮೂಲೆಯಲ್ಲೂ ತಾವು ಉತ್ಪಾದಿಸಿದ ಉತ್ಪನ್ನಗಳನ್ನು ಉತ್ತಮ ದರಕ್ಕೆ ಮಾರಾಟ ಮಾಡಲು ಅವಕಾಶ ಸಿಗಲಿದೆ.
ಇತರ ರಾಜ್ಯಗಳ ಪರವಾನಗಿ ಹೊಂದಿದ ವ್ಯಾಪಾರಿಗಳೊಂದಿಗೆ ಇನ್ನು ಮುಂದೆ ರೈತರು ನೇರವಾಗಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದಾಗಿದೆ. ಇದರಿಂದ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗಲಿದೆ. ಇದು ಮಾರುಕಟ್ಟೆಯಲ್ಲಿ ಸಹಕಾರವನ್ನು ವೃದ್ಧಿಸಲಿದೆ. ಎಲೆಕ್ಟ್ರಾನಿಕ್ ಟ್ರೇಡಿಂಗ್ ವೇದಿಕೆಗಳ ಮೂಲಕ ರೈತರು ಮತ್ತು ವ್ಯಾಪಾರಿಗಳು ತಮ್ಮ ರಾಜ್ಯ ಅಥವಾ ಇತರ ರಾಜ್ಯಗಳೊಂದಿಗೆ ವ್ಯಾಪಾರದಲ್ಲಿ ತೊಡಗಿಕೊಳ್ಳಬಹುದು. ಈ ಮಸೂದೆಯು ‘ಒಂದು ರಾಷ್ಟ್ರ ಒಂದು ಮಾರುಕಟ್ಟೆ’ ಗೆ ಪೂರಕವಾಗಿದೆ.
ಮಸೂದೆಗಳ ಅನುಮೋದನೆಯನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಇನ್ನು ಮುಂದೆ ರೈತರು ತಮ್ಮ ಉತ್ಪನ್ನಗಳನ್ನು ದೇಶದಾದ್ಯಂತ ಉತ್ತಮ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗಲಿದೆ, ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.