ಮೈಸೂರು: ಸೆ. 21 ರಿಂದ ತೊಡಗಿದಂತೆ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಕೇಂದ್ರದಿಂದ ತರಗತಿಗಳು ತೆರೆಯುವ ಸಲುವಾಗಿ ಪೂರಕ ಸೂಚನೆ ಸಿಕ್ಕ ಬಳಿಕವೇ ತರಗತಿಗಳನ್ನು ಆರಂಭ ಮಾಡಲಾಗುವುದು. 1-10 ನೇ ತರಗತಿಗಳವರೆಗಿನ ವಿದ್ಯಾರ್ಥಿಗಳ ದಾಖಲಾತಿಯನ್ನು ಸೆ. 30 ರೊಳಗಾಗಿ ಮುಗಿಸುವಂತೆಯೂ ಸಚಿವರು ಶಾಲೆಗಳಿಗೆ ಸೂಚಿಸಿದ್ದಾರೆ. ಖಾಸಗಿ ಶಾಲೆಗಳು ಒಂದು ಅವಧಿಯ ಶುಲ್ಕವನ್ನು ಮಾತ್ರವೇ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಸಮಸ್ಯೆ ಉಂಟಾದ ಪಕ್ಷದಲ್ಲಿ ಡಿಡಿಪಿಐ, ಬಿಇಒಗಳು ಈ ಸಂಬಂಧ ಕ್ರಮ ಕೈಗೊಳ್ಳಲು ಸರ್ಕಾರ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ. ಸಮಸ್ಯೆಗಳಾದಲ್ಲಿ ಪೋಷಕರು ಬಿಇಒಗಳನ್ನು ಸಂಪರ್ಕಿಸುವಂತೆಯೂ ಸಚಿವರು ಸೂಚಿಸಿದ್ದಾರೆ.
ಪ್ರಸ್ತುತ ಖಾಸಗಿ ಶಾಲೆಗಳ ವಿದ್ಯಾರ್ಥಿಗಳೂ ಸರ್ಕಾರಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗೆ ಸೇರುವವರ ಸಂಖ್ಯೆ ಅಧಿಕವಾಗಿದೆ. ಎಷ್ಟೇ ಮಕ್ಕಳು ಸರ್ಕಾರಿ ಶಾಲೆಗೆ ಸೇರಿದರೂ, ಅವರಿಗೆ ಬೇಕಾದ ಎಲ್ಲಾ ಸೌಕರ್ಯಗಳ ವ್ಯವಸ್ಥೆಯನ್ನು ಸರ್ಕಾರ ಮಾಡಲಿದೆ. ಸರ್ಕಾರಿ ಶಾಲೆಗೆ ಸೇರಲು ಬಯಸಿದ ಮಕ್ಕಳಿಗೆ ಖಾಸಗಿ ಶಾಲೆಗಳು ಟಿ. ಸಿ. ಕೊಡದೇ ಇದ್ದಲ್ಲಿ ಬಿಇಒಗಳ ಗಮನಕ್ಕೆ ಈ ವಿಚಾರವನ್ನು ತಂದು ಪೂರಕ ಕ್ರಮ ಕೈಗೊಳ್ಳುವುದಕ್ಕೆ ಅನುಕೂಲ ಮಾಡಬೇಕೆಂದೂ ಅವರು ಪಾಲಕರನ್ನು ಕೇಳಿಕೊಂಡಿದ್ದಾರೆ.
ಶಾಲಾರಂಭಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ, ಹೆತ್ತವರಲ್ಲಿ ಸಾವಿರಾರು ಆತಂಕಗಳಿದ್ದು, ಅವೆಲ್ಲವನ್ನೂ ನಿವಾರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.