ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಅಕ್ರಮವಾಗಿ ಗಾಂಜಾ ಬೆಳೆಯುವುದೂ ಬೆಳಕಿಗೆ ಬರಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚುರುಕಾಗಿ ಕೆಲಸ ಮಾಡಲಾರಂಭಿಸಿದ್ದು, ಅನಧಿಕೃತವಾಗಿ ಗಾಂಜಾ ಬೆಳೆಯುವವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ.
ಈ ಸಂಬಂಧ ಪಶ್ಚಿಮ ಘಟ್ಟಗಳ ತಪ್ಪಲಿನ ಪ್ರದೇಶಗಳಲ್ಲಿ ಅಕ್ರಮ ಬೇಟೆ ನಿಗ್ರಹ ಸಿಬ್ಬಂದಿ ಮತ್ತು ಇತರ ಸಿಬ್ಬಂದಿಗಳು ಗಾಂಜಾ ಬೆಳೆಯುವವರನ್ನು ಪತ್ತೆ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಹೆಚ್ಚಿನ ಕಾರ್ಯಾಚರಣೆಯ ಅಗತ್ಯವಿದ್ದು, ಪೂರಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯ ಪ್ರದೇಶಗಳು ಗಾಂಜಾ ಬೆಳೆಯುವವರಿಗೆ ಸುರಕ್ಷಿತ ತಾಣದಂತಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡಿನ ಕಾಡು ಪ್ರದೇಶಗಳಲ್ಲಿ ಗಾಂಜಾ ಬೆಳೆಯಲಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಇದನ್ನು ಖಾಸಗಿ ಉದ್ದೇಶ ಹಾಗೂ ವಾಣಿಜ್ಯ ಉದ್ದೇಶದಿಂದ ಬೆಳೆಯಲಾಗುತ್ತಿದೆ ಎಂಬ ಮಾಹಿತಿಯೂ ಇದೆ. ಇದಕ್ಕೆ ಸ್ಥಳೀಯರ ಬೆಂಬಲ ಇದೆ ಎಂಬ ಮಾಹಿತಿಗಳೂ ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಅಕ್ರಮವನ್ನು ತಳಮಟ್ಟದಿಂದಲೇ ಬೇಧಿಸುವ ಅಗತ್ಯವಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.