ಬೆಂಗಳೂರು: ರಾಜ್ಯದ ಪ್ರಮುಖ ಆರು ಕ್ಷೇತ್ರಗಳಲ್ಲಿ ಉದ್ಯಮ ಶೀಲತೆಯನ್ನು ಪ್ರೋತ್ಸಾಹಿಸುವ ಸಂಬಂಧ ಕರಡು ಯೋಜನಾ ವರದಿಗಳನ್ನು ಸಿದ್ಧ ಮಾಡಲಾಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ FKCCI ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಉದ್ಯಮಿಗಳಿಗೆ ರಫ್ತು ಉತ್ತೇಜನಾ ಪ್ರಶಸ್ತಿ ವಿತರಣೆ ನಡೆಸಿ ಬಳಿಕ ಅವರು ಮಾತನಾಡಿದರು.
ಪ್ರಸ್ತುತ ಕರ್ನಾಟಕ ಸಾಫ್ಟ್ವೇರ್ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದೆ. ಅದರೊಂದಿಗೆ ರಾಜ್ಯದಲ್ಲಿ ಆರೋಗ್ಯ ಮತ್ತು ಸ್ವಾಸ್ಥ್ಯ ಸೇವೆಗಳು, ಶೈಕ್ಷಣಿಕ ಕ್ಷೇತ್ರ, ಮೂಲಸೌಕರ್ಯಮತ್ತು ನಿರ್ಮಾಣ ಕ್ಷೇತ್ರ, ಪಾವತಿ ಹಾಗೂ ವಲಸೆ ನೆರವು ಸೇವೆಗಳು, ಸರಕು ಸಾಗಾಣೆ ಮತ್ತು ಸಾರಿಗೆ ಸೇವೆಗಳಲ್ಲಿ, ಮನೋರಂಜನೆ ವಲಯಗಳನ್ನು ಅಭಿವೃದ್ಧಿ ಮಾಡಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕರಡು ಯೋಜನಾ ವರದಿಗಳನ್ನು ಸಿದ್ಧ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಸ್ತುತ ಬಿಜೆಪಿ ಸರ್ಕಾರ ರೂಪಿಸಿರುವ ನೂತನ ಉದ್ಯಮ ನೀತಿಗಳ ಕಾರಣದಿಂದ ಕರ್ನಾಟಕ ಉದ್ಯಮಸ್ನೇಹಿ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿದೆ. ಮುಂದಿನ ಅವಧಿಯಲ್ಲಿ ಸುಲಲಿತ ಉದ್ದಿಮೆ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಜ್ಯ 5 ನೇ ಸ್ಥಾನದೊಳಗೆ ಗುರುತಿಸಿಕೊಳ್ಳಲಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ. 2019 ರ ನವೆಂಬರ್ ತಿಂಗಳಲ್ಲಿ ಈ ರ್ಯಾಂಕಿಂಗ್ ವ್ಯವಸ್ಥೆ ಆರಂಭವಾಗಿದ್ದು, ಈ ಬಾರಿ ಹಿಂದಿನ ಸರ್ಕಾರದ ಕ್ರಮಗಳನ್ನು ಆಧರಿಸಿ ಶ್ರೇಣಿ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ಸರ್ಕಾರ ರಫ್ತು ಉತ್ತೇಜನ, ಉದ್ಯೋಗ ಸೃಷ್ಟಿ ಕುರಿತಂತೆ ಅನೇಕ ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದೆ. ರಫ್ತು ವಹಿವಾಟಿನಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಸದ್ಯ ಬೇಲೆಕೇರಿ ಬಂದರು ಅಭಿವೃದ್ಧಿ ಯೋಜನೆ ಪ್ರಗತಿಯಲ್ಲಿದೆ. ಇದು ಸಂಪೂರ್ಣವಾದ ಬಳಿಕ ರಾಜ್ಯದ ರಫ್ತು ವಹಿವಾಟು ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.