ನವದೆಹಲಿ: ದೇಶದ ವಿವಿಧೆಡೆ ಎನ್ಐಎ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ 9 ಮಂದಿ ಉಗ್ರಗಾಮಿಗಳನ್ನು ಬಂಧಿಸಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.
ಕೇರಳದ ಎರ್ನಾಕುಳಂ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಗಳಲ್ಲಿ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರು ಸೆರೆಸಿಕ್ಕಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಬಂಧಿತ ಉಗ್ರರಿಂದ ಡಿಜಿಟಲ್ ಉಪಕರಣಗಳು, ಜಿಹಾದ್ ಸಾಹಿತ್ಯ, ಡಾಕ್ಯುಮೆಂಟ್ಸ್, ಶಸ್ತ್ರಾಸ್ತ್ರ, ಸ್ಥಳೀಯವಾಗಿ ಅಭಿವೃದ್ಧಿ ಮಾಡಿದ ಬಾಡಿ ಆರ್ಮರ್, ಸ್ಫೋಟಕ ತಯಾರಿಕಾ ಮಾಹಿತಿ ಹೊತ್ತ ಪುಸ್ತಕಗಳನ್ನು ತನಿಖಾ ಸಂಸ್ಥೆ ವಶಕ್ಕೆ ಪಡೆದುಕೊಂಡಿದೆ.
ಬಂಧಿತ ಉಗ್ರರನ್ನು ಪಾಕಿಸ್ಥಾನ ಮೂಲದ ಆಲ್ಕೈದಾ ಉಗ್ರ ಸಂಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನೇಮಕ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ. 6 ಜನರನ್ನು ಪ.ಬಂಗಾಳ ಮತ್ತು 3 ಜನರನ್ನು ಕೇರಳದಿಂದ ವಶಕ್ಕೆ ಪಡೆದಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.
ಇವರು ದೆಹಲಿ ಸೇರಿದಂತೆ ದೇಶದ ವಿವಿಧೆಡೆ ದಾಳಿ ನಡೆಸಲು ಸಂಚು ಮಾಡುತ್ತಿದ್ದರು. ಜೊತೆಗೆ ಫಂಡ್ ರೈಸಿಂಗ್ನಲ್ಲೂ ಈ ಉಗ್ರರು ಸಕ್ರಿಯರಾಗಿದ್ದರು. ಜೊತೆಗೆ ದೆಹಲಿಗೆ ತೆರಳಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಚಿಂತನೆ ನಡೆಸಿತ್ತು ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.