ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ವಿಭಾಗದ ವತಿಯಿಂದ ʼದಾಸ ಸಾಹಿತ್ಯದಲ್ಲಿ ಜೀವನ ಮೌಲ್ಯಗಳುʼ ಎಂಬ ವಿಷಯದ ವಿಚಾರ ಸಂಗೋಷ್ಠಿ ಆನ್ಲೈನ್ ಕಾರ್ಯಕ್ರಮ ಫೇಸ್ಬುಕ್ ಪೇಜ್ನಲ್ಲಿ ಸೆ.20ರಂದು ಭಾನುವಾರ ಸಂಜೆ 5 ಗಂಟೆಗೆ ಸರಿಯಾಗಿ ನಡೆಯಲಿದೆ.
ಈ ವಿಚಾರಗೋಷ್ಠಿಯಲ್ಲಿ ಪ್ರಖ್ಯಾತ ಗಾಯಕ ಸಂಗೀತ ವಿದ್ಯಾನಿಧಿ ಡಾ. ವಿದ್ಯಾಭೂಷಣ್ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಅ.ಭಾ.ಸಾ.ಪ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕೋಶಾಧಿಕಾರಿ ಮಾಧವ ಜೋಗಿತ್ತಾಯ ಅವರ ಉಪಸ್ಥಿತಿ ಇರಲಿದೆ, ಶಕ್ತಿ ಶಿಕ್ಷಣ ಸಂಸ್ಥೆಗಳು ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದ ಆಡಳಿತಾಧಿಕಾರಿ ಡಾ. ಕೆ.ಸಿ. ನಾಯ್ಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ನಿಗದಿತ ಸಮಯಕ್ಕೆ ABSP MANGALURU ಎಂದು ಫೇಸ್ಬುಕ್ನಲ್ಲಿ ಟೈಪ್ ಮಾಡುವ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಈ ಕಾರ್ಯಕ್ರಮವನ್ನು facebook.com/abspmangaluru ಮತ್ತು facebook.com/urnews13 ಪೇಜ್ಗಳಲ್ಲೂ ವೀಕ್ಷಣೆ ಮಾಡಬಹುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.